News Karnataka Kannada
Wednesday, May 01 2024
ಮಡಿಕೇರಿ

ರಾಜ್ಯದಲ್ಲಿ ಶೀಘ್ರವೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಅಗತ್ಯ ಕ್ರಮ : ಡಾ.ನಾರಾಯಣಗೌಡ

Karwar: Make community health officers permanent as per central government guidelines
Photo Credit :

ಮಡಿಕೇರಿ: ರಾಜ್ಯದಲ್ಲಿ ಶೀಘ್ರವೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿರುವ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು,ಇದಕ್ಕಾಗಿ ಕೊಡಗು ಸೇರಿದಂತೆ ರಾಜ್ಯದಲ್ಲಿ ಸೂಕ್ತ ಜಾಗ ಗುರುತಿಸಲಾಗುವುದು ಎಂದು ಹೇಳಿದರು.

ಕೊಡಗಿನಲ್ಲಿ ಕ್ರೀಡಾ ವಿವಿ ಸ್ಥಾಪನೆ ಹಾಗೂ ಕೊಡಗು ಜಿಲ್ಲೆಗೆ ಕ್ರೀಡಾ ಇಲಾಖೆಯಿಂದ ನೀಡಿರುವ ಅನುದಾನ ಕುರಿತು ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಕೊಡಗಿನಿಂದಲೂ ಪ್ರಸ್ತಾವನೆ ಬಂದಿದೆ. ಆದರೆ ವಿವಿ ಸ್ಥಾಪನೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನಿಯಮಗಳ ಅನ್ವಯ ಪರಿಶೀಲನೆ ನಡೆಸಿ ಸೂಕ್ತ ಜಾಗದಲ್ಲಿ ರಾಜ್ಯದ ಕ್ರೀಡಾ ವಿಶ್ವ ವಿದ್ಯಾಲಯ ಸ್ಥಾಪಿಸುವುದಾಗಿ ನುಡಿದರು.

ಕೊಡಗು, ಕ್ರೀಡೆ ಮೂಲಕ ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತಂದ ಜಿಲ್ಲೆಯಾಗಿದೆ. ಕೊಡಗು ಜಿಲ್ಲೆಗೆ ವಿವಿಧ ಕ್ರೀಡಾ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ 2.18 ಕೋಟಿ ರೂ. ಅನುದಾನ ನೀಡಲಾಗಿದೆ. ಅಲ್ಲದೆ, ಕೊಡಗು ಜಿಲ್ಲೆಯ ಕೂಡಿಗೆಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಹಾಕಿ ಟರ್ಫ್ ನಿರ್ಮಿಸಲಾಗಿದೆ. ಇಲ್ಲಿನ ಕ್ರೀಡಾ ಶಾಲೆಯಲ್ಲಿ ಒಟ್ಟು 290 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಪೊನ್ನಂಪೇಟೆಯಲ್ಲಿ ಹಾಕಿ ಸಿಂಥೆಟಿಕ್ ಟರ್ಫ್, ಸೋಮವಾರಪೇಟೆಯಲ್ಲಿ 4.02 ಕೋಟಿ ವೆಚ್ಚದಲ್ಲಿ ಹಾಕಿ ಟರ್ಫ್ ನಿರ್ಮಾಣ, ವೀರಾಜಪೇಟೆಯಲ್ಲಿ 3.26 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.

ಒಲಂಪಿಕ್ಸ್’ನಲ್ಲಿ ಭಾಗವಹಿಸಿದ ಕೊಡಗಿನ ವಿವಿಧ ಕ್ರೀಡೆಗಳ ತರಬೇತುದಾರರಾದ ಅಂಕಿತಾ ಸುರೇಶ್, ಕುಟ್ಟಪ್ಪ ಹಾಗೂ ಗಣಪತಿ ಅವರಿಗೆ ತಲಾ ಒಂದು ಲಕ್ಷ ರೂ ಗೌರವ ಧನ ನೀಡಲಾಗಿದೆ. ಕು.ಭವಾನಿ ತೆಕ್ಕಡೆ ಅವರಿಗೆ ಒಲಂಪಿಕ್ ಗೇಮ್ಸ್‌ನಲ್ಲಿ ಭಾಗವಹಿಸಲು ಅಗತ್ಯ ತರಬೇತಿ ಪಡೆಯಲು ಎರಡು ಲಕ್ಷ ರೂ‌. ಸಹಾಯಧನ ನೀಡಲಾಗಿದೆ. ಈ ಮೂಲಕ ಕ್ರೀಡೆಗೆ ಕೀರ್ತಿ ತಂದಿರುವ ಕೊಡಗು ಜಿಲ್ಲೆಗೆ ಕ್ರೀಡಾ ಇಲಾಖೆಯಿಂದ ಕೊಡುಗೆ ನೀಡಲಾಗುತ್ತಿದೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು