ಸೋಮವಾರಪೇಟೆ : ಸ್ವಾತಂತ್ರ್ಯೋತ್ಸವದ ಸಂದರ್ಭ ಕಾಗದ ಅಥವಾ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟçಧ್ವಜ ಬಳಕೆಯಾಗುತ್ತಿದ್ದು, ಧ್ವಜಕ್ಕೆ ಅವಮಾನ ಆಗುವಂತಹ ಘಟನೆಗಳು ಪ್ರತಿವರ್ಷ ನಡೆಯುತ್ತಿವೆ. ಇಂತವುಗಳನ್ನು ಮಾರಾಟ ಮಾಡುವವರು ಹಾಗೂ ಬಳಕೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.
ಇತ್ತೀಚೆಗೆ ರಾಷ್ಟಧ್ವಜದ ಚಿತ್ರ ಇರುವ ಮಾಸ್ಕ್ಗಳನ್ನು ಕೆಲವರು ಧರಿಸುತ್ತಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರ್ ಗೋವಿಂದರಾಜು ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭ ಬಿ.ಆರ್. ಈರಪ್ಪ ಮತ್ತು ರಾಮಕೃಷ್ಣ ಇದ್ದರು.
ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡದಿರಲು ಹಿಂದೂ ಜನಜಾಗೃತಿ ಸಮಿತಿ ಮನವಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.