ಸೋಮವಾರಪೇಟೆ :ರೋಟರಿ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೇಷನ್ ಬಿಲ್ಡರ್ ಪ್ರಶಸ್ತಿ ಹಾಗು ಕೊವಿಡ್ ಸಂದರ್ಭದಲ್ಲಿ ಅವಿರತಸೇವೆ ಸಲ್ಲಿಸಿದ್ದ ವೈದ್ಯರುಗಳಿಗೆ ಸನ್ಮಾನ ಕಾರ್ಯಕ್ರಮ ಮಾನಸ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು.
ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಮಾಜಿ ರಾಜ್ಯಪಾಲ ಸುರೇಶ್ ಚಂಗಪ್ಪ ಉದ್ಘಾಟಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಚ್.ಒ.ಡಿ ಡಾ. ಕೆ.ಜೆ. ಲೋಕೇಶ್, ಪ್ರೊ. ಡಾ. ರಾಜೇಶ್, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಸ್ತಿçರೋಗ ತಜ್ಞ ಶಿವಪ್ರಸಾದ್, ಜನರಲ್ ಸರ್ಜನ್ ಎನ್. ಸತೀಶ್ಕುಮಾರ್, ನಿವೃತ್ತ ಜಂಟಿ ನಿರ್ದೇಶಕ ಓ.ವಿ. ಕೃಷ್ಣಾನಂದ ಅವರುಗಳನ್ನು ಸನ್ಮಾನಿಸಿಯಾಯಿತು.
ಸಾಧಕರಾದ ಕಿರಗಂದೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿ.ಎನ್. ವಿನೊದ, ಕಿಬ್ಬೆಟ್ಟ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿಶಾಲಾಕ್ಷಿ ಹಾಗು ಕೂಡಿಗೆ ಕ್ರೀಡಾಶಾಲೆಯ ಮುಖ್ಯ ತರಬೇತುದಾರ ಡಿ.ಎಸ್. ವೆಂಕಟೇಶ್ ಅವರುಗಳಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊಟರಿ ಸಂಸ್ಥೆಯ ಅಧ್ಯಕ್ಷ ಎಂ.ಎ. ಪ್ರಕಾಶ್ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ವಲಯ ಕಾರ್ಯದರ್ಶಿ ವಸಂತ್ಕುಮಾರ್, ವಲಯ ಸೇನಾನಿ ಎಂ.ಡಿ. ಅಶೋಕ್, ರೋಟರಿ ಕಾರ್ಯದರ್ಶಿ ಡಿ.ಪಿ. ಧರ್ಮಪ್ಪ ಇದ್ದರು. ಕರೊನಾ ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭ ರೋಟರಿ ಸಂಸ್ಥೆ ಸಲ್ಲಿಸಿದ ಸೇವೆ ಬಗ್ಗೆ ನಿಕಟಪೂರ್ವ ಸಹಾಯಕ ರಾಜ್ಯಪಾಲ ಪಿ.ಕೆ.ರವಿ ತಿಳಿಸಿ, ವೈದ್ಯರ ಸಹಕಾರವನ್ನು ಶ್ಲಾಘಿಸಿದರು.
ರೋಟರಿ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೇಷನ್ ಬಿಲ್ಡರ್ ಪ್ರಶಸ್ತಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.