News Karnataka Kannada
Friday, May 03 2024
ಮಡಿಕೇರಿ

ವಿಧಾನ ಪರಿಷತ್ ಚುನಾವಣೆ: ಕೊಡಗಿನಲ್ಲಿ ಬಿರುಸಿನ ಮತದಾನ

Election
Photo Credit :

ಮಡಿಕೇರಿ: ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನಿಂದಲೇ‌ ಬಿರುಸಿನ‌ ಮತದಾನ ಆರಂಭವಾಗಿದೆ.ಪೂರ್ವಾಹ್ನ 10.30ರ ವೇಳೆಗೆ ಜಿಲ್ಲೆಯಲ್ಲಿ‌ ಶೇ.36ರಷ್ಟು ಮತದಾನವಾಗಿತ್ತು.

ಜಿಲ್ಲೆಯಲ್ಲಿ 1329 ಮಂದಿ‌ ಮತದಾನದ ಹಕ್ಕು ಪಡೆದಿದ್ದು, ಮಡಿಕೇರಿ ನಗರಸಭೆ ಆವರಣದಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಹಾಗೂ ನಗರಸಭೆಯ ಚುನಾಯುತ ಸದಸ್ಯರು ಬೆಳಗ್ಗೆಯೇ ಮತ ಚಲಾಯಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ನಗರದ ಕೋಟೆ ಮಹಾಗಣಪತಿ‌ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರ ಗೆಲುವಿಗಾಗಿ ಪ್ರಾರ್ಥಿಸಿ, ಬಳಿಕ ನಗರಸಭೆಯಲ್ಲಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ಕ್ಷೇತ್ರದಲ್ಲಿ ಮತದಾನದ ಹಕ್ಕು ಪಡೆದಿದ್ದರೂ, ಮಡಿಕೇರಿಯಲ್ಲಿ ಮತ ಚಲಾಯಿಸಿರುವುದು ವಿಶೇಷವಾಗಿತ್ತು.

ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ‌ಪರಿಷತ್ ನ ಒಂದು‌ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಹಾಗೂ ಬಿಜೆಪಿಯ ಸುಜಾ ಕುಶಾಲಪ್ಪ ನಡುವೆ ನೇರ ಸ್ಪರ್ಧೆ ಇರುವುದರಿಂದ ಈ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು