ಮಡಿಕೇರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಿವೃತ್ತಿ ಪಡೆಯುವ ಕಾಲ ಬಂದಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅಭಿಪ್ರಾಯಪಟ್ಟಿದ್ದಾರೆ.
ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್’ಳನ್ನು ಹೊಗಳಿ ಅಲ್ ಖೈದಾ ಮುಖಂಡ ಹರಿಬಿಟ್ಟಿರುವ ವಿಡಿಯೋ ಸಂಬಂಧ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕತ್ತಿ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಿಂದೆ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಇತ್ತೀಚೆಗೆ ಅವರು ನೀಡುತ್ತಿರುವ ಹೇಳಿಕೆಗಳು ಅವರ ವರ್ಚಸ್ಸಿಗೇ ಧಕ್ಕೆಯಾಗುವಂತಿದೆ. ಆದ್ದರಿಂದ ಅವರು ನಿವೃತ್ತಿಯಾಗುವ ಕಾಲ ಸಮೀಪಿಸಿದೆ ಎಂದು ಹೇಳಿದರು.
ಅಲ್ ಖೈದಾ ಮುಖ್ಯಸ್ಥ ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್ ಹೊಗಳಿದ ವಿಡಿಯೋ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಉಮೇಶ್ ಕತ್ತಿ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರು ಯಾರೊಂದಿಗೆ ವ್ಯಾಪಾರ, ವ್ಯವಹಾರ ನಡಸಬೇಕೆಂಬುದು ಅವರವರಿಗೆ ಸಂಬಂಧಿಸಿದ ವೈಯಕ್ತಿಕ ವಿಚಾರವಾಗಿದ್ದು, ಇಂತಹ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಅಲ್ಲದೆ ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯ ಇನ್ನೂ ಬಂದಿಲ್ಲ ಎಂದೂ ಅವರು ನುಡಿದರು.