News Karnataka Kannada
Wednesday, May 08 2024
ಮಡಿಕೇರಿ

 ವೀರಶೈವಲಿಂಗಾಯತರನೆಲ್ಲಾ ಹಿಂದುಳಿದ 2 ಆ ವರ್ಗಕ್ಕೆ ಸೇರಿಸಲು ಮನವಿ

Kodagu
Photo Credit :
ಸೋಮವಾರಪೇಟೆ : ವೀರಶೈವಲಿಂಗಾಯತರನೆಲ್ಲಾ ಹಿಂದುಳಿದ 2 ಆ ವರ್ಗಕ್ಕೆ ಸೇರಿಸಲು ವೀರಶೈವಲಿಂಗಾಯತ ಸಂಘಟನಾ ವೇದಿಕೆ ಆಗ್ರಹ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಕೆ.
 ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ 2a ಗೆ ಸೇರಿಸಬೇಕೆಂಬ ಬೇಡಿಕೆಯಲ್ಲಿ ಸರ್ಕಾರದ ಆದೇಶದಂತೆ  ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ರಾದ  ಜಯಪ್ರಕಾಶ್ ಹೆಗ್ಡೆ ನೇತೃತ್ವದ ತಂಡ ಕೊಡಗು ಜಿಲ್ಲೆಗೆ ಆಗಮಿಸಿದೆ.
ವೀರಶೈವಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರಿ ಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ನೇತೃತ್ವದ ತಂಡ ಆಯೋಗವನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೊಡಗು ಜಿಲ್ಲೆಯಲ್ಲಿ ವೀರಶೈವಲಿಂಗಾಯತ ಒಂದೇ ಎಂಬ ಭಾವನೆಯಿಂದ,ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ ಆದರೆ ಮೀಸಲಾತಿಯ ನೆಪದಲ್ಲಿ ಸಮುದಾಯವನ್ನು ಒಡೆಯುವುದು ಬೇಡ. ಮೀಸಲಾತಿ ಕಲ್ಪಿಸುವುದಾದರೆ ವೀರಶೈವ ಲಿಂಗಾಯತ ಸಮುದಾಯದವರಿಗೆಲ್ಲಾ ಅನುಕೂಲವಾಗುವಂತೆ  ಆ ಆಕಾಶ ಮಾಡಿ ಕೊಡಿ ಎಂದು ಆಯೋಗಕ್ಕೆ ಮನವರಿಕೆ ಮಾಡಿದರು.
ಮನವಿ ಸ್ವೀಕರಿಸಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿನೀಡಿ  ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭ ವೀರಶೈವ ಲಿಂಗಾಯತ ಸಂಘಟನಾವೇದಿಕೆ ಯ ಜಿಲ್ಲಾದ್ಯಕ್ಷ ಎ.ಎಸ್.ಮಲ್ಲೇಶ್, ಕಾರ್ಯದರ್ಶಿ ಗಿರೀಶ್,ಮಹಿಳಾ ಘಟಕದ ಜಿಲ್ಲಾದ್ಯೆಕ್ಷೆ ಉಷಾರಾಣಿ, ಗೌರವಾಧ್ಯಕ್ಷ ಭುವನೇಶ್ವರಿ,ಉಪಾಧ್ಯಕ್ಷೆ ಭಾಗವತಿದೆಶ್ಮಖ್,ಕಾರ್ಯದರ್ಶಿ ಗೀತಾ ರಾಜು,ಸರಿತಾ,ತಾಲೂಕು ಘಟಕದ ಅಧ್ಯಕ್ಷ ಜಿ.ಬಿ.ಜಯರಾಜ್, ವೀರಶೈವ ಮಹಾಸಭಾದ ಯುವಘಟಕದ  ತಾಲೂಕು ಅಧ್ಯಕ್ಷ ಆದರ್ಶ್ ಪದಾಧಿಕಾರಿಗಳಾದ ಪ್ರೇಂನಾಥ್,ಲಿಕಿತ್, ಜೀವನ್. ಹಾಗೂ ಮುಂತಾದವರು ಹಾಜರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು