ಸೋಮವಾರಪೇಟೆ: ಶಾಲಾ ವಿದ್ಯಾರ್ಥಿಗಳ ಮೇಲೆ ನಾಯಿಯೊಂದು ದಾಳಿ ನಡೆಸಿದ ಪರಿಣಾಮ ಪುಟಾಣಿಗಳಿಬ್ಬರು ಆಸ್ಪತ್ರೆ ಸೇರಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಆವರಣದಲ್ಲಿ ಪ್ರಾರ್ಥನೆಗೆ ಸಜ್ಜಾಗುತ್ತಿದ್ದ ವೇಳೆ ನಾಯಿಯೊಂದು ಏಕಾಏಕಿ ಮಕ್ಕಳ ಮೇಲೆ ದಾಳಿ ನಡೆಸಿ ಸಿಕ್ಕಿದವರನ್ನು ಕಚ್ಚಲಾರಂಭಿಸಿದೆ.
ಈ ಅನಿರೀಕ್ಷಿತ ಘಟನೆಯಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಓಡಲಾರಂಭಿಸಿದ್ದಾರೆ. ಆದರೂ ಮೂರನೇ ತರಗತಿಯ ಕಿಶನ್ ಹಾಗೂ ಒಂದನೇ ತರಗತಿಯ ಧ್ವನಿ ಎಂಬ ವಿದ್ಯಾರ್ಥಿಗಳ ಕಾಲು ಹಾಗೂ ತೊಡೆಯ ಭಾಗಕ್ಕೆ ನಾಯಿ ಕಚ್ಚಿದೆ.
ನಾಯಿ ದಾಳಿಯಿಂದ ಮಕ್ಕಳನ್ನು ರಕ್ಷಿಸಲು ಶಿಕ್ಷಕಿಯರು ಹರಸಾಹಸ ಪಡಬೇಕಾಯಿತು. ಗಾಯಗೊಂಡ ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು.
ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯಿನಿ ಮಿಲ್ಡ್ರೆಡ್ ಗೊನ್ಸಾಲ್ವೆಸ್ ಪೊಲೀಸ್ ಹಾಗೂ ಪಟ್ಟಣ ಪಂಚಾಯತಿಗೆ ದೂರು ನೀಡಿದ್ದಾರೆ.
ಇದೇ ನಾಯಿ ಮಂಗಳವಾರ ಬೆಳಗ್ಗೆ ಕಕ್ಕೆಹೊಳೆ ಸಮೀಪ ಇಬ್ಬರಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪ ಇಬ್ಬರಿಗೆ ಸೇರಿದಂತೆ ಒಟ್ಟು ಆರು ಮಂದಿಗೆ ಕಚ್ಚಿದ್ದು, ನಾಲ್ಕೈದು ನಾಯಿಗಳಿಗೂ ಕಚ್ಚಿದೆ ಎನ್ನಲಾಗಿದೆ.
ಪಟ್ಟಣ ಪಂಚಾಯತ್ ಅಧ್ಯಕ್ಷ ಚಂದ್ರು, ಸದಸ್ಯರಾದ ಶೀಲಾ ಡಿಸೋಜ, ಮಹೇಶ್, ಎಸ್.ಮಹೇಶ್ ಹಾಗೂ ಮುಖ್ಯಾಧಿಕಾರಿ ನಾಚಪ್ಪ ಆಸ್ಪತ್ರೆಗೆ ತೆರಳಿ ಮಕ್ಕಳ ಯೋಗ ಕ್ಷೇಮ ವಿಚಾರಿಸಿದರು.
ಪಟ್ಟಣದಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಪಟ್ಟಣ ಪಂಚಾಯಿತಿಯ ನಿರ್ಲಕ್ಷ್ಯದಿಂದ ಸಿಕ್ಕವರ ಮೇಲೆ ನಾಯಿ ಕಚ್ಚುವಂತಾಗಿದೆ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…