News Karnataka Kannada
Saturday, May 04 2024
ಮಡಿಕೇರಿ

ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

Latest News
Photo Credit :

ಕೊಡಗು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ವಾರ್ಷಿಕ ವೇಳಾ ಪಟ್ಟಿಯಂತೆ ಉಪನ್ಯಾಸ ನಡೆಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2022ರ ಫೆಬ್ರವರಿವರೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕ ಕಾರ್ಯಕ್ರಮದ ವೇಳಾಪಟ್ಟಿಯಂತೆ ಉಪನ್ಯಾಸ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಸಮುದಾಯ ಪೊಲೀಸ್‍ನಲ್ಲಿ ವಿದ್ಯಾರ್ಥಿಗಳ ಪಾತ್ರ ಬಗ್ಗೆ ಮಾಹಿತಿ ನೀಡುವುದು, ಸ್ವಚ್ಛ ಹಾಗೂ ಹಸಿರು ಶಾಲೆ, ರಸ್ತೆ ಸುರಕ್ಷತೆ, ಟ್ರಾಪಿಕ್ ಬಗ್ಗೆ ಅರಿವು, ಅಪಘಾತಕ್ಕೆ ಕಾರಣಗಳು, ಅಪಘಾತ ತಡೆಯುವುದು, ಪ್ರಥಮ ಚಿಕಿತ್ಸೆ ಬಗ್ಗೆ ಉಪನ್ಯಾಸ ನೀಡುವುದು, ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವ ಬಗ್ಗೆ ಉಪನ್ಯಾಸ, ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡುವುದು, ಗುಂಪು ಚರ್ಚೆ ಮಾಡುವುದು, ಮಹಿಳೆಯರ ಸುರಕ್ಷತೆ ಮತ್ತು ಮಕ್ಕಳ ರಕ್ಷಣೆ ಹಾಗೂ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡುವುದು, ಪ್ರಾಕೃತಿಕ ವಿಕೋಪ ನಿರ್ವಹಣೆ, ಹೀಗೆ ಹಲವು ವಿಚಾರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಸ್ಟೂಡೆಂಟ್ ಪೊಲೀಸ್ ಕೆಡೆಟ್ ಉದ್ದೇಶವಾಗಿದೆ ಎಂದು ಕಮಾಂಡೆಂಟ್ ಹಾಗೂ ನೋಡಲ್ ಅಧಿಕಾರಿ ಬಿ.ಡಿ.ಲೋಕೇಶ್ ಅವರು ಮಾಹಿತಿ ನೀಡಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಗಾಳಿಬೀಡು ಬಳಿಯ ಜವಾಹರ್ ನವೋದಯ ವಿದ್ಯಾಲಯ, ನಗರದ ಕೇಂದ್ರಿಯ ವಿದ್ಯಾಲಯ, ಕುಶಾಲನಗರ, ಪೊನ್ನಂಪೇಟೆ, ವೀರಾಜಪೇಟೆ, ಶಿರಂಗಾಲ ಮತ್ತು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನಾ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಸಹಾಯಕ ಕಮಾಂಡೆಂಟ್ ಹರೀಶ್, ಜಿಲ್ಲಾ ನೋಡಲ್ ಅಧಿಕಾರಿ ಮಹಂತೇಶ್ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು