ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆಯ ಆ.15 ರಂದು ವೀಕೆಂಡ್ ಕರ್ಫ್ಯೂಗೆ ವಿನಾಯಿತಿ ನೀಡುವಂತೆ ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಹಾಗೂ ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ ಮನವಿ ಮಾಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ವೋದಯ ಸಮಿತಿಯ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ದೇಶವ್ಯಾಪಿ ಸಂಭ್ರಮದಿಂದ ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಮಡಿಕೇರಿಯಲ್ಲಿ ಸರ್ವೋದಯ ಸಮಿತಿ ಹಾಗೂ ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ನ ಜಂಟಿ ಆಶ್ರಯದಲ್ಲಿ ವಿನೂತನವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ನಗರದ ಎಲ್ಲಾ ವಾಣಿಜ್ಯೋದ್ಯಮಿ ಹಾಗೂ ವರ್ತಕ ಸಮುದಾಯ ತಮ್ಮ ಅಂಗಡಿ ಮುಂಗಟ್ಟುಗಳ ಮುಂಭಾಗ ರಾಷ್ಟ್ರಧ್ವಜವನ್ನು ಹಾಕುವ ಮೂಲಕ ಅಮೃತ ಮಹೋತ್ಸವವನ್ನು ಸಂಭ್ರದಿಂದ ಆಚರಿಸುವಂತೆ ಮನವಿ ಮಾಡಿದರು. ಆ.13 ರಂದು ಮಧ್ಯಾಹ್ನ 3 ಗಂಟೆಗೆ ಎರಡು ಸಂಸ್ಥೆಗಳ ಸಹಯೋಗದಲ್ಲಿ ನಗರದ ಎಲ್ಲಾ ಮಳಿಗೆಗಳಿಗೆ ಉಚಿತವಾಗಿ ರಾಷ್ಟ್ರಧ್ವಜವನ್ನು ನೀಡಲಾಗುವುದು ಎಂದರು.
ರಾಷ್ಟçಧ್ವಜಕ್ಕೆ ಗೌರವ ನೀಡುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಹಾಗೂ ತ್ರಿವರ್ಣ ಧ್ವಜವಿರುವ ಮಾಸ್ಕ್ ಗಳನ್ನು ಮಾರಾಟ ಮತ್ತು ಬಳಕೆ ಮಾಡದಂತೆ ತಿಳಿಸಿದರು.
ಹೆಚ್ಚಿನ ಮಾಹಿತಿಗೆ 9844461777 ದೂರವಾಣಿ ಸಂಖ್ಯೆಯನ್ನು ಸಂರ್ಪಕಿಸುವಂತೆ ರಮೇಶ್ ಮನವಿ ಮಾಡಿದರು.
ಸ್ವಾತಂತ್ರ್ಯ ದಿನವಾದರು ವೀಕೆಂಡ್ ಕರ್ಫ್ಯೂಗೆ ವಿನಾಯಿತಿ ನೀಡಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.