ಮಡಿಕೇರಿ: ತಮ್ಮ ಬಳಿಯಿದ್ದ ಹುಲಿ ಉಗುರನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಆರೋಪಿಗಳಿಂದ ಬರೋಬರಿ ಇಪ್ಪತ್ತೆರಡು ಹುಲಿ ಉಗುರುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಬಂಧಿತರನ್ನು ಜಡೆಸ್ವಾಮಿ ಹಾಗೂ ರಾಮಚಂದ್ರ ಎಂದು ಗುರುತಿಸಲಾಗಿದ್ದು, ಇವರು ನಗರದ ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಸಿದ್ದಾಪುರ ಕಡೆಗೆ ಹೋಗುವ ರಸ್ತೆ ಬದಿಯಲ್ಲಿರುವ ಬಸ್ ನಿಲ್ದಾಣದ ಬಳಿ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ನಿಖರ ಮಾಹಿತಿ ಬಂದ ಹಿನ್ನಲೆಯಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು.ಸವಿ, ಸಿಬ್ಬಂದಿ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ಅವರುಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅವರ ಬಳಿಯಿದ್ದ ಇಪ್ಪತ್ತೆರಡು ಹುಲಿ ಉಗುರುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಆರೋಪಿಗಳಿಗೆ ಹುಲಿ ಉಗುರು ಸಿಕ್ಕಿದ್ದು ಎಲ್ಲಿಂದ? ಯಾರಿಗೆ ಮಾರಾಟ ಮಾಡಲು ತಂದಿದ್ದರು? ಇವರ ಹಿಂದೆ ಬೃಹತ್ ಜಾಲ ಇದೆಯಾ? ಎಂಬಿತ್ಯಾದಿ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…
ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…