ಮಡಿಕೇರಿ: ದಕ್ಷಿಣ ಕೊಡಗಿನ ವಿ.ಬಾಡಗ ಸಮೀಪದ ತೋಟವೊಂದರಲ್ಲಿ ಇತ್ತೀಚೆಗೆ ಹುಲಿ ದಾಳಿಗೆ ಬಲಿಯಾದ ಕಾರ್ಮಿಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು 5.50 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.
ದಕ್ಷಿಣ ಕೊಡಗಿನ ವಿ.ಬಾಡಗ ಗ್ರಾಮದ ಒಂದನೇ ರುದ್ರಗುಪ್ಪೆ ಗ್ರಾಮದ ತೋಟವೊಂದರಲ್ಲಿ ಕಾಳುಮೆಣಸು ಕೊಯ್ಯಲು ತೆರಳಿದ್ದ ಗದ್ದೆಮನೆ ನಿವಾಸಿ ಗಣೇಶ್(ಪುಟ್ಟು-29) ಅವರು ಹುಲಿ ದಾಳಿಗೆ ಬಲಿಯಾಗಿದ್ದರು.
ಶುಕ್ರವಾರ ಅತ್ತೂರು ಬಳಿಯ ಅವರ ನಿವಾಸಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭ ಮೃತರ ಕುಟುಂಬದವರಿಗೆ 5.50ಲಕ್ಷ ರೂ.ಗಳ ಪರಿಹಾರದ ಚೆಕ್ ಹಸ್ತಾಂತರಿಸಿದರು.
ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಶ್ಚಿಮ ಘಟ್ಟ ಕಾರ್ಯಪಡೆಯ ಅರಣ್ಯ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ ಮತ್ತಿತರರು ಹಾಜರಿದ್ದರು.
ಬಳಿಕ ಅರಣ್ಯ ಸಚಿವರು ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸರಹದ್ದಿನ ಸುಳುಗೋಡುವಿಗೆ ತೆರಳಿ ಆನೆ ಹಾವಳಿ ತಡೆಗೆ ರೈಲ್ವೇ ಕಂಬಿಯಿಂದ ನಿರ್ಮಿಸಲಾದ ಬೇಲಿಯನ್ನು ಪರಿಶಿಲಿಸಿದರು.
ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…