News Karnataka Kannada
Thursday, May 02 2024
ಮಡಿಕೇರಿ

ಹೊರಗಿನವರಿಗಿಂತ ಒಳಗಿನ ಶತ್ರುಗಳೇ ಹೆಚ್ಚು ಅಪಾಯಕಾರಿ : ಸಂಸದ ಪ್ರತಾಪ್‌ಸಿಂಹ

Pratap Simha
Photo Credit :

ಮಡಿಕೇರಿ: ಹೆಲಿಕಾಪ್ಟರ್ ದುರಂತದಲ್ಲಿ ಸೇನಾಪಡೆಗಳ ಮುಖ್ಯಸ್ಥರು ಮೃತಪಟ್ಟವರಿಗೆ ಸಂತಾಪ ಅಥವಾ ಮೌನದ ಮೂಲಕ ಬೇಸರ ವ್ಯಕ್ತಪಡಿಸುವ ಬದಲು ಇದಕ್ಕೆ ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಸಂತೋಷಪಟ್ಟಿರುವುದು ದೇಶದ್ರೋಹಿ ಕೃತ್ಯವಾಗಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಲು ಮಡಿಕೇರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸೇನಾಧಿಕಾರಿಗಳ ಸಾವನ್ನು ಸಂಭ್ರಮಿಸಿದ ಕೃತ್ಯ ಖಂಡನೀಯವೆಂದರು.

ಚೀನಾ ಅಥವಾ ಪಾಕಿಸ್ತಾನವನ್ನು ಬೇಕಾದರೂ ಎದುರಿಸಬಹದು.ಆದರೆ ದೇಶದೊಳಗಿನ ಶತ್ರುಗಳು ಹೆಚ್ಚು ಅಪಾಯಕಾರಿಯಾಗಿದ್ದಾರೆ. ಇವರುಗಳ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುವುದಾಗಿ ಹೇಳಿದರು.

ಹೆಲಿಕಾಪ್ಟರ್ ದುರಂತ ಮತ್ತು ಸೇನಾಧಿಕಾರಿಗಳ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರ್ಷ ವ್ಯಕ್ತಪಡಿಸಿದ ದೇಶದ್ರೋಹಿಗಳನ್ನು ಹಾಗೂ ದೇಶವನ್ನು ಛಿದ್ರ ಮಾಡಲು ಹವಣಿಸುತ್ತಿರುವವರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಪ್ರತಾಪ್ ಸಿಂಹ ಒತ್ತಾಯಿಸಿದರು.

15 ಸ್ಥಾನಗಳಲ್ಲಿ ಜಯ: ರಾಜ್ಯದಲ್ಲಿ 12 ರಿಂದ 15 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಭವಿಷ್ಯ ನುಡಿದ ಅವರು, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವು ಶತಸಿದ್ಧ ಎಂದು ಹೇಳಿದರು.

ಸಾವಿರ ಮತಗಳ ಅಂತರ: ಕೊಡಗಿನ ಅಭ್ಯರ್ಥಿ ಸುಜಾಕುಶಾಲಪ್ಪ ಅವರು ಸುಮಾರು 40ವರ್ಷಗಳಿಂದ ಪಕ್ಷ ಹಾಗೂ ಸಮಾಜದ ಸೇವೆ ಮಾಡಿದ್ದು, ಅವರು ಒಂದು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ತನಗೆ ಮಡಿಕೇರಿ ಹಾಗೂ ಮೈಸೂರಿನಲ್ಲಿ ಮತದಾನ ಮಾಡಲು ಅವಕಾಶವಿದ್ದರೂ ಮಡಿಕೇರಿಯಲ್ಲೇ ಮತದಾನ ಮಾಡಿದ್ದೇನೆ. ಕೊಡಗಿನ ಎಲ್ಲೆಡೆ ನಾನು ಪ್ರಚಾರಕ್ಕೆ ಕೈಜೋಡಿಸಿದ್ದು, ಸೋಮವಾರಪೇಟೆ ಭಾಗದಲ್ಲಿ ಕೊಂಚ ಚಿಂತೆಯಿತ್ತಾದರೂ, ಆ ಭಾಗದಲ್ಲಿ ಪ್ರಚಾರಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಪ್ರತಾಪ್ ಸಿಂಹ ನುಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು