News Karnataka Kannada
Saturday, May 04 2024
ಮಡಿಕೇರಿ

ಬಿರುನಾಣಿಯಲ್ಲಿ ಬಿಜೆಪಿ ತೊರೆದು 13 ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್,ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಸಕ್ರಮೀಕರಣ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ ಅವರ ಉಪಸ್ಥಿತಿಯಲ್ಲಿ ಬಿರುನಾಣಿಯಲ್ಲಿ ಬಿಜೆಪಿ ಪಕ್ಷದ ಪ್ರಮುಖರು ಸೇರಿ 13 ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬುಧುವಾರ ಸೇರ್ಪಡೆಗೊಂಡರು.
Photo Credit : NewsKarnataka

ಮಡಿಕೇರಿ:  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್,ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಸಕ್ರಮೀಕರಣ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ ಅವರ ಉಪಸ್ಥಿತಿಯಲ್ಲಿ ಬಿರುನಾಣಿಯಲ್ಲಿ ಬಿಜೆಪಿ ಪಕ್ಷದ ಪ್ರಮುಖರು ಸೇರಿ 13 ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬುಧುವಾರ ಸೇರ್ಪಡೆಗೊಂಡರು.

ಬಿರುನಾಣಿ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ,ಬಿರುನಾಣಿ ಬಿಜೆಪಿ ಬೂತ್ ಮಾಜಿ ಅಧ್ಯಕ್ಷ ಕರ್ತಮಾಡ ಮಿಲನ್ ಮೇದಪ್ಪ,ಬಿರುನಾಣಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ, ಅಣ್ಣೀರ ಪ್ರವೀಣ್,ಚೋನೀರ ಜೀವನ್,ಕರ್ತಮಾಡ ಬಿಪಿನ್,ಅಣ್ಣೀರ ಗಪ್ಪಣ್ಣ,ಚಂಗಣಮಾಡ ಜೀವನ್,ತೊತ್ತೆರ ರಾಜ,ಬೀರುಗ ಗ್ರಾಮದ ಅಣ್ಣಳಮಾಡ ಗಿರೀಶ್,ಕೆ.ಸಿ.ಗಪ್ಪು, ಆಂಟನಿ,ಕರ್ತಮಾಡ ರೋಹಿತ್,ಬೊಟ್ಟಂಗಡ ರೀಟಾ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು.

ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಿಲನ್ ಮೇದಪ್ಪ, ಬೊಟ್ಟಂಗಡ ಗಿರೀಶ್ ಮಾತನಾಡಿ ಶಾಸಕ ಪೊನ್ನಣ್ಣ ಅವರ ಜನ ಪರ ಪ್ರಾಮಾಣಿಕ ಕಾಳಜಿ ಮತ್ತು ಕಾರ್ಯವೈಖರಿಯೊಂದಿಗೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭ ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣ ಮಾಡ ಪ್ರೀತಮ್, ಬುಟ್ಟಿಯಂಡ ತಂಬಿ ನಾಣಯ್ಯ, ಬೊಳ್ಳೇರ ಅಪ್ಪುಟ ಪೊನ್ನಪ್ಪ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು