Categories: ಮಡಿಕೇರಿ

2024ರೊಳಗೆ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೂ ನೀರು: ಕೆ.ಜಿ.ಬೋಪಯ್ಯ

ಮಡಿಕೇರಿ : ಪ್ರಧಾನ ಮಂತ್ರಿಗಳ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮಗಳ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರಕಾರದಿಂದ 1.30 ಕೋಟಿ ಹಣ ಬಿಡುಗಡೆಯಾಗಿದ್ದು, 2024 ರ ಹೊತ್ತಿಗೆ ಗ್ರಾಮದ ಎಲ್ಲಾ ಮನೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಇಲ್ಲಿಗೆ‌ ಸಮೀಪದ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹೋಗಲು ರಸ್ತೆ , ತಡೆಗೋಡೆ ನಿರ್ಮಿಸಲು ಮತ್ತು ಇಂಟರ್ ಲಾಕ್ ಅಳವಡಿಸುವ ಸುಮಾರು 17 ಲಕ್ಷ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಕಾಮಗಾರಿಗೆ ಸಂಸದರ ನಿಧಿಯಿಂದ 3 ಲಕ್ಷ, ವಿಧಾನ ಪರಿಷತ್ ಸದಸ್ಯರ ಅನುದಾನದಿಂದ 5 ಲಕ್ಷ, ವಿಧಾನ ಸಭಾ ಸದಸ್ಯರ ಅನುದಾನದಿಂದ‌ 5 ಲಕ್ಷ ಮತ್ತು ರಸ್ತೆಗೆ 4 ಲಕ್ಷ ರೂ.ಗಳ ಅನುದಾನವಿದೆ ಎಂದರು.

ಪ್ರಧಾನ ಮಂತ್ರಿಗಳ ಜಲಜೀವನ್ ಮಿಷನ್ ಯೋಜನೆಯನ್ವಯ ಕೇಂದ್ರ ಸರಕಾರ ಶೇಕಡ 60 ಮತ್ತು ರಾಜ್ಯ ಸರಕಾರ ಶೇಕಡಾ 40 ಮತ್ತು ಗ್ರಾಮ ಪಂಚಾಯಿತಿ ಶೇಕಡಾ 15 ರಷ್ಟು ಹಣವನ್ನು ವ್ಯಯಿಸಸಬೇಕಿದೆ. ಈ ಯೋಜನೆಯ ಫಲಾನುಭಾವಿಗಳು ಉಪಯೋಗಿಸುವ ನೀರಿಗೆ ವಾರ್ಷಿಕವಾಗಿ ಸ್ವಲ್ಪ ರೀತಿಯ ಹಣವನ್ನು ಪಾವತಿ ಮಾಡಬೇಕಿದೆ ಎಂದರು.

ಈಗಾಗಲೇ ರಾಜ್ಯ ಸರಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಯ ದುರಸ್ತಿಗೆ ಹಣವನ್ನು ಬಿಡುಗಡೆ ಮಾಡಿದೆ ಎಂದ ಅವರು, ನಿರಂತರ ಮಳೆಯಿಂದ ಕಾಮಗಾರಿಯನ್ನು ಪ್ರಾರಂಭಿಸಲು ಸಾಧ್ಯವಾಗಿಲ್ಲ. ರಸ್ತೆಗಳು ತೀರಾ ಹದಗೆಟ್ಟಿದ್ದು ನಡೆಯಲಾರದ ಸ್ಥಿತಿಗೆ ತಲುಪಿದ್ದು, ಮಳೆ ನಿಂತ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಇದಕ್ಕೆ ಜನರ ಸಹಕಾರ ಮುಖ್ಯ ಎಂದು ಹೇಳಿದರು.

ಗ್ರಾಮೀಣ ರಸ್ತೆಗಳು ಸತತ ಮಳೆಯಿಂದಾಗಿ ಹದಗೆಡುತ್ತಿವೆ. ಮಳೆ ನಿಂತ ಕೂಡಲೇ ರಸ್ತೆಗಳನ್ನು ದುರಸ್ತಿಪಡಿಸಲು ಕ್ರಮಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪಾಡಿ ಇಗ್ಗುತ್ತಪ್ಪ ದೇವಾಲಯದ ಅರ್ಚಕರಾದ ಶ್ರೀನಿವಾಸ್ ಮತ್ತು ಶ್ರೀಕಾಂತ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

Sneha Gowda

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

6 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

30 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago