News Karnataka Kannada
Thursday, May 02 2024
ಮಡಿಕೇರಿ

ಗ್ರಾಮಸ್ಥರ ಸಮಸ್ಯೆಯನ್ನು ಸ್ಥಳದಲ್ಲಿಯೇ ಬಗೆಹರಿಸಿದ ಎ.ಎಸ್.ಪೊನ್ನಣ್ಣ

ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ ಸಮಸ್ಯೆಯನ್ನು ಸ್ಥಳದಲ್ಲಿಯೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಇತ್ಯರ್ಥ ಪಡಿಸಿದ ಘಟನೆ ಭಾಗಮಂಡಲದಲ್ಲಿ ನಡೆದಿದೆ.
Photo Credit : News Kannada

ಭಾಗಮಂಡಲ: ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ ಸಮಸ್ಯೆಯನ್ನು ಸ್ಥಳದಲ್ಲಿಯೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಇತ್ಯರ್ಥ ಪಡಿಸಿದ ಘಟನೆ ಭಾಗಮಂಡಲದಲ್ಲಿ ನಡೆದಿದೆ.

ಸರ್ವೆ ನಂ 74 ರಲ್ಲಿ ಭಾಗಮಂಡಲ ಗ್ರಾಮ ಪಂಚಾಯತಿ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿದ್ದು ಪಕ್ಕದ ಸರ್ವೆ ನಂ ಜಾಗ ದೇವರಕಾಡು ಅರಣ್ಯಕ್ಕೆ ಸೇರಿದ್ದಾಗಿರುತ್ತದೆ. ಸದರಿ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನೀರಿನ ಪಂಪ್,ಮೋಟಾರ್ ಹಾಗೂ ಪೈಪ್’ಗಳನ್ನು ವಶಪಡಿಸಿಕೊಂಡಿತ್ತು. ಜೊತೆಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೆ ರಸ್ತೆ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ರಸ್ತೆ ಮಾಡಿದ್ದಾರೆ ಎಂದು ಕೇಸ್ ದಾಖಲಿಸಿದ್ದರು.

ಇಂದು ಭಾಗಮಂಡಲದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲು ಮಾನ್ಯ ಎ.ಎಸ್.ಪೊನ್ನಣ್ಣ ನವರು ಆಗಮಿಸಿದಾಗ ಭಾಗಮಂಡಲ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು ಹಾಗೂ ಗ್ರಾಮದ ನಿವಾಸಿಗಳು ಸಮಸ್ಯೆಯನ್ನು ಬಗೆ ಹರಿಸಲು ಶಾಸಕರಲ್ಲಿ ಕೋರಿಕೊಂಡರು.

ತಕ್ಷಣವೇ ಪೊನ್ನಣ್ಣ ನವರು ಸ್ಥಳಕ್ಕೆ ಅರಣ್ಯ ಅಧಿಕಾರಿಗಳನ್ನು ಕರೆಸಿಕೊಂಡು ಪರಿಶೀಲನೆ ನಡೆಸಿ ಅರಣ್ಯ ಇಲಾಖೆ ಗಡಿಯನ್ನು ಇನ್ನೂ ಕೂಡ ಗುರುತಿಸದೇ ಇರುವುದರಿಂದ ಹಾಗೂ ಕುಡಿಯುವ ನೀರು ಮೂಲಭೂತ ಹಕ್ಕು ಆಗಿರುವುದರಿಂದ ತಕ್ಷಣವೇ ಮೋಟಾರ್ ಪಂಪ್ ಗಳನ್ನು ಹಿಂತಿರುಗಿಸಿ ನೀರಿನ ವ್ಯವಸ್ಥೆಗೆ ಅಡ್ಡಿ ಪಡಿಸದಂತೆ ಸಂಭಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾನೂನು ರೀತಿ ಅಡಚಣೆ ಬಂದರೆ ತಾವು ಇತ್ಯರ್ಥ ಪಡಿಸುವವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿ ಗ್ರಾಮಸ್ಥರಿಗೆ ನೆರವಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು