News Karnataka Kannada
Saturday, May 11 2024
ಮಡಿಕೇರಿ

ಆಮ್ ಆದ್ಮಿ ಪಾರ್ಟಿ ಸಭೆ: ಕೊಡಗಿನಲ್ಲಿ ಪಕ್ಷದ ಬಲವರ್ಧನೆ- ಎಂ.ಕೆ.ಅಪ್ಪಯ್ಯ ವಿಶ್ವಾಸ

Kodagu Aap
Photo Credit : By Author

ಮಡಿಕೇರಿ, ಜೂ.13 : ಶಿಕ್ಷಣ, ಉದ್ಯೋಗ ಮತ್ತು ಸಮಾನತೆಗೆ ಆದ್ಯತೆ ನೀಡುವ ಮೂಲಕ ದೇಶದ ಜನರ ಮನೆ ಮಾತಾಗಿರುವ ಆಮ್ ಆದ್ಮಿ ಪಾರ್ಟಿ ಕೊಡಗು ಜಿಲ್ಲೆಯಲ್ಲೂ ತನ್ನ ಬಲವನ್ನು ವೃದ್ಧಿಸಿಕೊಳ್ಳಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿರಾಜಪೇಟೆ ಪ.ಪಂ ಸಭಾಭವನದಲ್ಲಿ ನಡೆದ ಪಕ್ಷದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜಕೀಯ ಪರಿವರ್ತನೆಯ ಕಾಲ ಸನ್ನಿಹಿತವಾಗಿದ್ದು, ಕೊಡಗಿನಲ್ಲಿ ಆಮ್ ಆದ್ಮಿ ಪಾರ್ಟಿ ಬಲಗೊಳ್ಳಲು ಕಾರ್ಯಕರ್ತರ ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ರಾಜ್ಯ ಸಾಮಾಜಿಕ ಮಾಧ್ಯಮ ನಿರ್ವಾಹಕ ಅಬ್ದುಲ್ ರಜಾಕ್ ಮಾತನಾಡಿ, ಆಮ್ ಆದ್ಮಿ ಪಕ್ಷ ಬೆಳೆದು ಬಂದ ರೀತಿ ಮತ್ತು ಎಎಪಿ ಸರಕಾರದ ಸಾಧನೆಗಳನ್ನು ವಿವರಿಸಿದರು.

ಕೊಡಗಿನ ಜನ ಉನ್ನತ ಶಿಕ್ಷಣಕ್ಕಾಗಿ, ವೈದ್ಯಕೀಯ ಅವಶ್ಯಕತೆಗಳಿಗಾಗಿ ಮತ್ತು ಉದ್ಯೋಗಕ್ಕಾಗಿ ಅಕ್ಕ-ಪಕ್ಕದ ಜಿಲ್ಲೆಗಳ ಮೇಲೆ ಅವಲಂಬಿತರಾಗಬೇಕಾಗಿದೆ. ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಕೊಡಗು ಸಾಕಷ್ಟು ಅಭಿವೃದ್ಧಿಯನ್ನು ಹೊಂದಲಿದೆ ಎಂದರು.

ಪಕ್ಷದ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಪಕ್ಷವನ್ನು ಬಲಪಡಿಸುವ ಕುರಿತು ಕಾರ್ಯಕರ್ತರಿಗೆ ಸಲಹೆಗಳನ್ನು ನೀಡಿದರು. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಆಮ್ ಆದಿ ಪಾರ್ಟಿಯೊಂದಿಗೆ ಕೊಡಗಿನ ಜನ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಆಮ್ ಆದಿ ಪಾರ್ಟಿಯ ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಸಭೆಯಲ್ಲಿ ಉಪಸ್ಥಿತರಿದ್ದ ಮುಖಂಡರು ನಿರ್ಧಾರ ಕೈಗೊಂಡರು.

ಕಾರ್ಯಕರ್ತರುಗಳಾದ ಕೆ.ಸಿ.ವೆಂಕಟೇಶ್ ಸ್ವಾಗತಿಸಿ, ಎಂ.ಆರ್.ಮಂಜುನಾಥ್ ನಿರೂಪಿಸಿದರು. ಪ್ರಮುಖರಾದ ಹೆಚ್.ಜಿ.ಬಾಲಸುಬ್ರಹ್ಮಣ್ಯ ವಂದಿಸಿದರು. ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಪವನ್, ಜಿಲ್ಲೆಯ ವಿವಿಧೆಡೆಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು