ಕೊಡಗು: ಚುನಾವಣೆ ಸಂದರ್ಭದಲ್ಲಿ ಗೊಂದಲಗಳು ಸಹಜ ಬಿಜೆಪಿ ಸರ್ಕಾರ ಕೊಡಗು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಿದೆ. ಜಿಲ್ಲೆಯ ನಾವಿಬ್ಬರು ಶಾಸಕರು ಸತತವಾಗಿ ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಿದ್ದೇವೆ ಎಂದು ಶಾಸಕ ಕೆ ಜಿ ಬೋಪೆಯ್ಯ ಹೇಳಿದರು.
ಮಡಿಕೇರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡಗಿನ ಪ್ರಮುಖ ಸಮಸ್ಯೆಯಾದ ಜಮ್ಮಬಾಣೆ ಸಮಸ್ಯೆ ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಕೆಲವರು ಇನ್ನೂ ತಡೆಯೋಡಲಿಕ್ಕೆ ಪ್ರಯತ್ನವನ್ನು ಪಡುತ್ತಿದ್ದಾರೆ. ಕೊಡಗಿನ ರಸ್ತೆಗಳಿಗೆ ಹೆಚ್ಚಿನ ಅನುದಾನವನ್ನು ತರುವಲ್ಲಿ ನಾವು ಸಫಲರಾಗಿದ್ದೇವೆ. ನಮ್ಮ ಇಷ್ಟು ವರ್ಷದ ಅಧಿಕಾರ ಅವಧಿಯಲ್ಲಿ ಅತಿ ಹೆಚ್ಚು ಹಣ ರಸ್ತೆಗೆ ತಂದಿದ್ದೇವೆ. ಕೊಡಗಿನ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ನಮ್ಮ ಆತ್ಮ ಸಾಕ್ಷಿಯಾಗಿ ಪ್ರಯತ್ನವನ್ನು ಪಟ್ಟಿದ್ದೇವೆ. ಹೇಳಿದರು.
ಮಾಧ್ಯಮದವರ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ ಬೋಪಯ್ಯನವರು ತಮ್ಮ ಸ್ಪರ್ಧೆಯ ಬಗ್ಗೆ ಮಾತನಾಡಿ ಪಕ್ಷದ ತೀರ್ಮಾನಕ್ಕೆ ನಾನು ಬದ್ಧರಾಗುತ್ತೇನೆ ಎಂದರು.