News Karnataka Kannada
Thursday, May 02 2024
ಮಡಿಕೇರಿ

ಕೊಡವ ಪಾಲೆ ಜನಾಂಗದ ಅಭಿವೃದ್ಧಿಗೆ ಬದ್ದ: ಶಾಸಕ ಪೊನ್ನಣ್ಣ

ಅನಾದಿ ಕಾಲದಿಂದಲೂ ಕೊಡವ ಸಂಸ್ಕೃತಿಯನ್ನು ಆಚರಿಸುತ್ತ, ಕೊಡಗಿನ ಮೂಲನಿವಾಸಿಗಳಾಗಿ ಬಾಳುತ್ತಿರುವ ಕೊಡವ ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ದನಾಗಿರುವುದಾಗಿರುವುದಾಗಿ ಶಾಸಕ ಎಸ್. ಪೊನ್ನಣ್ಣ ಹೇಳಿದ್ದಾರೆ.
Photo Credit : By Author

ಮಡಿಕೇರಿ: ಅನಾದಿ ಕಾಲದಿಂದಲೂ ಕೊಡವ ಸಂಸ್ಕೃತಿಯನ್ನು ಆಚರಿಸುತ್ತ, ಕೊಡಗಿನ ಮೂಲನಿವಾಸಿಗಳಾಗಿ ಬಾಳುತ್ತಿರುವ ಕೊಡವ ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ದನಾಗಿರುವುದಾಗಿ ಶಾಸಕ ಎಸ್. ಪೊನ್ನಣ್ಣ ಹೇಳಿದ್ದಾರೆ.

ಮೂರ್ನಾಡಿನಲ್ಲಿ ನಡೆದ ಕೊಡವ ಪಾಲೆ ಜನಾಂಗದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊಡವ ಪಾಲೆ ಅಥವಾ ಅರಮನೆಪಾಲೆ ಜನಾಂಗವು ಕೊಡವ ಸಂಸ್ಕೃತಿಯನ್ನು ಪಾಲಿಸುತಿದ್ದು, ಅವರದ್ದೇ ಶೈಲಿಯ ಶ್ರಮದಿಂದ ಶಾಂತಿಯುತವಾಗಿ ಬಾಳುತ್ತಿರುವ ಜನಾಂಗ, ಇತ್ತೀಚೆಗೆ ತೀವ್ರ ಜನಸಂಖ್ಯೆ ಕುಸಿತ ಆಗುತ್ತಿದ್ದು, ಈ ಜನಾಂಗದ ರಕ್ಷಣೆ ನಮ್ಮ ಸರ್ಕಾರದ ಹೊಣೆಯಾಗಿದೆ ಅದನ್ನು ತಾವು ಪಾಲಿಸುತ್ತೇನೆ ಎಂದರು.

ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದೀಗ ಪರಿಶಿಷ್ಟ ಜಾತಿ ಎಂದು ತಪ್ಪಾಗಿ ಪರಿಗಣನೆ ಆಗಿರುವುದು ತನ್ನ ಗಮನಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಗಿರುವ ತಾಂತ್ರಿಕ ಅಡಚಣೆಯನ್ನು ಸರಿಪಡಿಸಿ, ಅಧಿಕೃತವಾಗಿ ಪರಿಶಿಷ್ಟ ಪಂಗಡ ಎಂದು ಮರು ಆದೇಶ ಮಾಡಿಸಲಾಗುವುದು ಎಂದು ಹೇಳಿದರು.

ಅಖಿಲಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾತನಾಡಿ, ಕೊಡವ ಪಾಲೆ ಜನಾಂಗವು ಅನಾದಿಕಾಲದೊಂದಿಗೆ ಕೊಡವ ಸಂಸ್ಕೃತಿಯನ್ನು ಪಾಲಿಸುತ್ತಾ, ನಿಷ್ಟೆ ಮತ್ತು ಪ್ರಾಮಾಣಿಕ ಜನಾಂಗವಾಗಿ ಬಾಳುತ್ತಿದ್ದು, ಅವರ ಮೂಲ ಕಸುಬನ್ನು ತಪ್ಪದೇ ಪಾಲಿಸುತ್ತಿದ್ದಾರೆ. ಕೊಡಗಿನ ಎಲ್ಲಾ ಮೂಲ ನಿವಾಸಿ ಜನಾಂಗಗಳು ಅವರವರ ಕುಲ ಮತ್ತು ಸಂಪ್ರದಾಯಕ್ಕೆ ಬದ್ಧರಾಗಿ ಒಗ್ಗಟ್ಟಿನಿಂದ ಬಾಳುವಂತೆ ಆಗಬೇಕು ಎಂದರು.

ಕೊಡವ ಭಾಷಿಕ ಮೂಲನಿವಾಸಿ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ. ಮೇಚಿರ ಸುಭಾಶ್ ನಾಣಯ್ಯ ಅವರು ಮಾತನಾಡಿ, ಸರ್ವ ಕೊಡವ ಭಾಷಿಕ ಜನಾಂಗಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಸಂಸ್ಕೃತಿಯನ್ನು ಬೆಳೆಸುವತ್ತ ಒಟ್ಟಾಗಿ ಸಾಗಬೇಕಾಗಿದೆ, ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳು ನಡೆಯಬೇಕು ಎಂದರು.

ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರು ಮಾತನಾಡಿ, ಕೊಡವ ಪಾಲೆ ಜನಾಂಗ ತಮ್ಮ ಮೂಲತನದ ಅಸ್ತಿತ್ವದ ಅನ್ವೇಷಣೆಗೆ ಮುಂದಾಗಿ ಜನಾಂಗೀಯ ದಾಖಲೆ ರಚಿಸಬೇಕು, ತಮ್ಮ ಮೂಲತನವನ್ನ ಉಳಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಲಿ, ಇಂತ ಕಾರ್ಯಕ್ರಮಗಳಲ್ಲಿ ಎಲ್ಲರೂ ಪಾಲ್ಗೊಳ್ಳುವಿಕೆಯಿಂದ ಸಹಬಾಳ್ವೆಗೆ ನಾಂದಿಯಾಗಲಿ ಎಂದರು.

ಜನಾಂಗದ ಹಿರಿಯ, ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ಅಧ್ಯಕ್ಷರಾದ ಜಿ.ಚೆನಿಯ ನಾಪೋಕ್ಲು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಮಂಞಿರ ಸಾಬುತಿಮ್ಮಯ್ಯ, ಕೊಡಗು ಹೆಗ್ಗಡೆ ಸಮಾಜದ ಕಾರ್ಯದರ್ಶಿ ಪಡಿಞಾರಂಡ ಪ್ರಭುಕುಮಾರ್, ಕೊಡಗು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಕುಡಿಯರ ಮುತ್ತಪ್ಪ, ಅಹಿಂದ ಅಧ್ಯಕ್ಷ ತೋರೆರ ಮುದ್ದಯ್ಯ, ಕೊಡವ ಭಾಷಿಕ ಸಮುದಾಯ ಕೂಟದ ಕಾರ್ಯದರ್ಶಿ ಮೊಳ್ಳೆಕುಟ್ಟಡ ದಿನುಬೋಜಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಸೇರಿದಂತೆ ಕೊಡವ ಪಾಲೆ ಜನಾಂಗದ ಪ್ರಮುಖರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು