ಕೊಡಗು: ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆಕಾಶ್ ಅವರ ಮೇಲೆ ಅವರ ಪತ್ನಿ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
2022 ರಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ನಿವೃತ ಡಿ ಐ ಜಿ ಟಿ.ಆರ್ ಸುರೇಶ್ ಅವರ ಪುತ್ರಿ ವಂದನ ಅವರನ್ನು ವಿವಾಹವಾಗಿದ್ದು ಆಕಾಶ್ ನಂತರ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆಕಾಶ್ ಪತ್ನಿಯೊಂದಿಗೆ ಮಡಿಕೇರಿಯಲ್ಲಿ ವಾಸವಾಗಿದ್ದರು. ಮದುವೆಯಾದ ನಂತರ ಅತ್ತೆ, ಮಾವ, ಮೈದುನ ಹಾಗೂ ಪತಿ ಸೇರಿಕೊಂಡು ವರದಕ್ಷಿಣೆಯನ್ನು ತರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ವಂದನಾ ಉಲ್ಲೇಖಿಸಿದ್ದಾರೆ.