ಮಡಿಕೇರಿ: ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು. ದೀರ್ಘ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಗೆ ಪ್ರತಿಪಕ್ಷವಾಗಿ ಹೇಗೆ ವರ್ತಿಸಬೇಕು ಎನ್ನುವುದೇ ಗೊತ್ತಿಲ್ಲ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಕೇವಲ ಹತ್ತು ದಿನಗಳ ಹಿಂದೆಯಷ್ಟೆ ಬಂದು ಮಳೆಗೆ ತೆಗೆದು ಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದ್ದೆ. ಕಂದಾಯ ಸಚಿವ ಆರ್.ಅಶೋಕ್ ಸಹ ಈಚೆಗಷ್ಟೆ ಬಂದು ಪರಿಶೀಲನೆ ನಡೆಸಿದ್ದರು. ಸರ್ಕಾರ ಕೊಡಗನ್ನು ಮರೆತಿದೆ ಎನ್ನುವ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರ ಎಂದರು.
ಗ್ರಾಮ ಪಂಚಾಯತಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಕಾರ್ಯಪಡೆ ರಚಿಸಲಾಗಿದೆ. 2018 ರ ದುರಂತದ ಮಾದರಿಯಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ವಿತರಿಸಲಾಗಿದೆ ಎಂದರು.
ಚೆಕ್ ಡ್ಯಾಂ ನಲ್ಲಿ ಮರಗಳು ಸಿಲುಕಿ ಮನೆಗಳಿಗೆ ನೀರು ನುಗ್ಗಿದೆ. ಕೂಡಲೆ ಮರಗಳನ್ನು ತೆರವುಗೊಳಿಸಲಾಗಿದೆ
55 ಮನೆಗಳು ಭಾಗಶಃ , 2 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. 3 ಸೇತುವೆ 1 ಶಾಲೆ, 1 ದೇಗುಲಕ್ಕೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.