News Karnataka Kannada
Monday, April 29 2024
ಮಡಿಕೇರಿ

ಸೈನಿಕ ಶಾಲೆ ಕೊಡಗಿನಲ್ಲಿ ಬ್ರಹ್ಮಗಿರಿ ಸಹೋದಯ ಕ್ಲಸ್ಟರ್‌ನ ಸಿ ಬಿ ಎಸ್ ಸಿ ಅಂತರ ಶಾಲೆಗಳ ಕ್ರೀಡಾ ಕೂಟ

Inter School Football and Handball Competition
Photo Credit : By Author

ಕುಶಾಲನಗರ, ಡಿ.16: ದಿನಾಂಕ 16.12.2022ರಂದು ಸೈನಿಕ ಶಾಲೆ ಕೊಡಗಿನಲ್ಲಿ ಬ್ರಹ್ಮಗಿರಿ ಸಹೋದಯ ಸಂಕೀರ್ಣ ಸಿ ಬಿ ಎಸ್ ಸಿ ಅಂತರ ಶಾಲೆಗಳ ಪುಟ್‌ಬಾಲ್ ಮತ್ತು ಹ್ಯಾಂಡ್‌ಬಾಲ್ ಕ್ರೀಡಾ ಕೂಟವನ್ನು ಆಯೋಜಿಸಲಾಗಿತ್ತು.

ಪ್ರಸ್ತುತ ಕ್ರೀಡಾಕೂಟಕ್ಕೆ ಸೈನಿಕ ಶಾಲೆ ಕೊಡಗು, ಸೂಳ್ಯದ ಕೆ ವಿ ಜಿ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆ, ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆ, ಅರ್ಮೆರಾದ ಎಸ್ ಎಂ ಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜುಕೇಷನ್, ಮಡಿಕೇರಿಯ ಎ ಎಲ್ ಜಿ ಕ್ರೆಸೆಂಟ್ ಶಾಲೆ ಹಾಗೂ ಅತೂರಿನ ನ್ಯಾಷನಲ್ ಅಕಾಡೆಮಿ ಶಾಲೆ ಒಟ್ಟು 06 ಶಾಲೆಗಳು ಭಾಗವಹಿಸಿದ್ದವು. ಪ್ರಸ್ತುತ ಸ್ಪರ್ಧೆಯಲ್ಲಿ 12 ರಿಂದ 16 ವಯೋಮಾನದ ಬಾಲಕರಿಗೆ ಪುಟ್‌ಬಾಲ್ ಹಾಗೂ ಬಾಲಕಿಯರಿಗೆ ಹ್ಯಾಂಡ್‌ಬಾಲ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದ ಉದ್ಘಾಟನೆಯನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೈನಿಕ ಶಾಲೆ ಕೊಡಗು ಪ್ರಾಂಶುಪಾಲರಾದ ಕರ್ನಲ್ ಜಿ ಕಣ್ಣನ್‌ರವು ಜ್ಯೋತಿ ಬೆಳಗುವುದರ ಮೂಲಕ ಉದ್ಭಾಟಿಸಿದರು.

ಪ್ರಸ್ತುತ ಸ್ಪರ್ಧೆಯ ಬಾಲಕರ ಪುಟ್‌ಬಾಲ್ ವಿಭಾಗದಲ್ಲ್ಲಿ ನಾಪೊಕ್ಲುವಿನ ಅಂಕುರ್ ಪಬ್ಲಿಕ್ ಶಾಲೆ ಪ್ರಥಮ ಸ್ಥಾನವನ್ನು ಪಡೆದರೆ, ಸೂಳ್ಯದ ಕೆ ವಿ ಜಿ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಹಾಗೆಯೇ ಬಾಲಕಿಯರ ಹ್ಯಾಂಡ್‌ಬಾಲ್ ವಿಭಾಗದಲ್ಲಿ ರ‍್ಮೆರಾದ ಎಸ್ ಎಂ ಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜುಕೇಷನ್ ಶಾಲೆಯು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಪುಟ್ಬಾಲ್ ವಿಭಾಗದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ಅಂಕುರ್ ಪಬ್ಲಿಕ್ ಶಾಲೆಯ ಮಾಸ್ಟರ್ ಅಖಿಲ್ ಭಾಜನರಾದರೆ, ಹ್ಯಾಂಡ್‌ಬಾಲ್ ವಿಭಾಗದಲ್ಲಿ ಅರ್ಮೆರಾದ ಎಸ್ ಎಂ ಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜಕೇಷನ್ ಶಾಲೆಯ ಕುಮಾರಿ ಸಂಜನ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರು.

ಇದೇ ದಿನದಂದು ಸಂಜೆ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದ್ದು, ಸೈನಿಕ ಶಾಲೆ ಕೊಡಗಿನ ಪ್ರಾಂಶುಪಾಲರಾದ ಕರ್ನಲ್ ಜಿ ಕಣ್ಣನ್‌ರವರು ಆಗಮಿಸಿದ್ದರು. ವಿಜೇತ ತಂಡಗಳಿಗೆ ಪ್ರಶಸ್ತಿಪತ್ರ, ಪಾರಿತೋಷಕ ಮತ್ತು ಪದಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳು, ವಿಜೇತ ತಂಡಗಳಿಗೆ ಅಭಿನಂದನೆ ಸಲ್ಲಿಸಿದರು. ಪ್ರಸ್ತುತ ಕ್ರೀಡಾಕೂಟದ ಆಯೋಜನೆಯು ಸೈನಿಕ ಶಾಲೆಯ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲನ್ನು ನಿರ್ಮಿಸಿದೆ. ಎಲ್ಲಾ ಸ್ಪರ್ಧಾಳಗಳು ತಮ್ಮ ಕ್ರೀಡಾ ಸ್ಪೂರ್ತಿಯಿಂದ ಪಾಲ್ಗೊಂಡು ಕ್ರೀಡಾಕೂಟಕ್ಕೆ ಅರ್ಥಪೂರ್ಣ ಮ್ಯೌಲ್ಯವನ್ನು ನೀಡಿದರು. ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಸ್ಪರ್ಧೆಯಲ್ಲಿ ಪಾಲ್ಗೊಂಡು ಗೆಲುವಿಗಾಗಿ ಹೋರಾಟ ನಡೆಸುವುದು ಮುಖ್ಯ.. ಪರಾಭವ ಹೊಂದಿದ ತಂಡಗಳು ತಮ್ಮಲ್ಲಿರುವ ನ್ಯೂನ್ಯತೆಯನ್ನ ಸರಿಪಡಿಸಿಕೊಂಡು ಭವಿಷ್ಯದ ಸ್ಪರ್ಧೆಗೆ ತಮ್ಮನ್ನು ತಾವು ಸಮರ್ಥಗೊಳಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕ್ರೀಡಾಕೂಟದ ಆಯೋಜನೆಗೆ ಸಹಕರಿಸಿದ ಸಹೋದಯ ಬ್ರಹ್ಮಗಿರಿ ಕ್ಲಸ್ಟರ್‌ನ ಎಲ್ಲಾ ಸಿ ಬಿ ಎಸ್ ಸಿ ಶಾಲೆಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಪ್ರಸ್ತುತ ಸ್ಪರ್ಧೆಯ ಸಂಚಾಲಕರಾಗಿ ಗಣಿತ ಶಿಕ್ಷಕರಾದ ಸುರೇಶ್, ಬಿ ಹೆಚ್ ಎಂ ರನೀಶ್, ಸಿ ಹೆಚ್ ಎಂ ಸ್ಟಾಲಿನ್, ಕಾರ್ಪೋರಲ್ ಶಿವ, ಸಾರ್ಜೆಂಟ್ ಸಿ ರಾಯ್ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿವರ್ಗದವರೊಂದಿಗೆ, ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು