News Karnataka Kannada
Thursday, May 02 2024
ಮಡಿಕೇರಿ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ರಾಜ್ಯದ ಎಲ್ಲಾ ಮಳಿಗೆಗಳಲ್ಲಿ ಅಳವಡಿಸುವ ಬೋರ್ಡ್​ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು,  ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ.
Photo Credit : News Kannada

ಕೊಡಗು: ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್  ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಘಟನೆ ಸಂಬಂಧ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಸಿಎಂ‌ ಸಿದ್ದರಾಮಯ್ಯ  ಪ್ರತಿಕ್ರಿಯೆ ನೀಡಿದ್ದಾರೆ.

ಕೊಡಗಿನಲ್ಲಿ ಮಾತನಾಡಿದ ಸಿಎಂ‌ ಸಿದ್ದರಾಮಯ್ಯ, ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್​ಸಿ ಮಾಡಿದ್ದೆವು. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು ಎಂದು ತಿಳಿಸಿದ್ದಾರೆ.

ನಾವೇನು ಗುಲಾಮರಾ ಎಂಬ ಸಚಿವ ಕೆ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ವೊಬ್ಬರು ಒಂದೊಂದು ಹೆಸರನ್ನ ಸಜೆಸ್ಟ್ ಮಾಡ್ತಾರೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ತಿಳಿಸಿದ್ದಾರೆ.

ಬಿಜೆಪಿಗೆ ಜಗದೀಶ್ ಶೆಟ್ಟರ್​ ಮರು ಸೇರ್ಪಡೆಯಾದ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ನಿನ್ನೆ ನಾನು ಕರೆ ಮಾಡಿ ಮಾತಾಡಿದಾಗ ನಾನು ಹೋಗಲ್ಲ ಎಂದಿದ್ದರು. ನಾವು ಸೀನಿಯರ್​ ಲೀಡರ್​ ಎಂದು ಸ್ಥಾನಮಾನ ಕೊಟ್ಟಿದ್ವಿ. ಈಗ ನಾನು ಫ್ಯಾಕ್ಸ್​​ನಲ್ಲಿ ರಾಜೀನಾಮೆ ಕೊಡುತ್ತೇನೆ ಅಂದಿದ್ದಾರೆ. ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೋ ಏನೋ ಗೊತ್ತಿಲ್ಲ. ನಾವು ಅವರನ್ನ ಬಹಳ ಗೌರವದಿಂದ ನಡೆಸಿಕೊಂಡಿದ್ದೇವೆ. ನನಗೆ ಈವರೆಗೂ ರಾಜೀನಾಮೆ ಪತ್ರ ತಲುಪಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು