ಕೊಡಗು: ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್ ಕೋರ್ ಕಮಿಟಿಯನ್ನು ರಚಿಸಿದೆ.ಇದೀಗ ಶನಿವಾರ ಕೊಡಗಿಗೆ ಸಾ.ರ. ಮಹೇಶ್ ಹಾಗೂ ಜಿ.ಟಿ. ದೇವೇಗೌಡರ ಭೇಟಿ ನೀಡಲಿದ್ದಾರೆ. ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕು ಅಧ್ಯಕ್ಷರನ್ನು ಈಗ ಇರುವ ಅದೇ ಹುದ್ದೆಗಳಲ್ಲಿ ಮುಂದುವರೆಸಿಕೊಂಡು ಹೋಗಲು ಕುಮಾರಸ್ವಾಮಿ ಆದೇಶ ನೀಡಿದ್ದಾರೆ. ಜೆಡಿಎಸ್ ಪ್ರಮುಖರ ಜೊತೆ ಕುಮಾರಸ್ವಾಮಿ ಮಾತುಕತೆ ಮಾಡಿ ಈ ಸ್ಪಷ್ಟನೆ ನೀಡಿದ್ದಾರೆ.
ಕೊಡಗು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ ಎಲ್ ವಿಶ್ವ, ಕೊಡಗು ಜಿಲ್ಲಾ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಪಿ ಡಿ ರವಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಪಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಸಿ ಎಸ್ ನಾಗರಾಜ್, ಕೊಡಗು ಜಿಲ್ಲಾ ಯುವ ಜೆಡಿಎಸ್ ಸಂಘಟನ ಕಾರ್ಯದರ್ಶಿ ರಕ್ಷಿತ್ ಯಡೂರು, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಜಾಸಿರ್ ಹಾಗೂ ಅಲ್ಪ ಘಟಕದ ಜಿಲ್ಲಾಧ್ಯಕ್ಷ ಶಿವದಾಸ್ ಅವರು ಕುಮಾರಸ್ವಾಮಿ ಜೊತೆಗಿನ ಸಭೆಯಲ್ಲಿ ಭಾಗಿಯಾಗಿದ್ದರು. .