ಮಡಿಕೇರಿ: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲೂ ಗೆಲುವು ನಿಶ್ಚಿತ. ಜೆಡಿಎಸ್ ನ 18 ಶಾಸಕರು ಪಕ್ಷದೊಂದಿಗೆ ಇದ್ದಾರೆ ಯಾವುದೇ ಶಾಸಕ ಮತ್ತು ನಾಯಕರು ಜೆಡಿಎಸ್ ಬಿಟ್ಟು ಪಕ್ಷಾಂತರ ಮಾಡಿಲ್ಲ. ಜೆಡಿಎಸ್ ಕಟ್ಟಾಳುಗಳು ಪಕ್ಷ ನಿಷ್ಠರಾಗಿದ್ದಾರೆ ಎಂದು ಮಡಿಕೇರಿಯಲ್ಲಿ ಜೆಡಿಎಸ್ ಸಭೆಯಲ್ಲಿ ಜಿ ಟಿ ದೇವೇಗೌಡ ಹೇಳಿಕೆ ನೀಡಿದರು.
ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಖಂಡಿತ. ಇದಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದೇವೆ. ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಗೆ ಬಲವಾದ ಬೇರುಗಳಿವೆ. ಈ ಆಧಾರದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದರು.