ಕೊಡಗು: ನಿರಕ್ಕೂ ಠೇವಣಿ ಸಂಗ್ರಹ ಹಾಗೂ ಸಾಲ ವಿತರಣೆಯಲ್ಲಿ ಕೊಡಗು ಜಿಲ್ಲಾ ಡಿಸಿಸಿ ಬ್ಯಾಂಕ್ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಹೊಂದಿದೆ ಎಂದು ಜಿಲ್ಲಾ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಬಾಂಡ್ ಗಣಪತಿಯವರು ಹೇಳಿದ್ದಾರೆ.
ಗೌಡಲ್ಲಿ ಕೃಷಿ ಉತ್ಪನ್ನ ಸಹಕಾರ ಸಂಘದ ವತಿಯಿಂದ ಬ್ಯಾಂಕಿನ ಸಭಾಂಗಣದಲ್ಲಿ ಆಯೋಜಿಸಲಾಗಿದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನವನ್ನು ಸ್ವೀಕರಿಸಿ ಬಾಂಡ್ ಗಣಪತಿಯವರು ಮಾತನಾಡಿ ಸಹಕಾರಿ ಷೇರು ಹೂಡಿಕೆಯಲ್ಲಿ ಶೇಕಡ 25ರಷ್ಟು ಪ್ರಗತಿ ಕಂಡು ಪ್ರಥಮ ಸ್ಥಾನವನ್ನು ಗಳಿಸಿದೆ. ಹಾಗೆ ಸಾವಿರ ಕೋಟಿ ಸಾಲ ನೀಡಿ ಪ್ರಥಮ ಸ್ಥಾನವನ್ನು ಪಡೆದಿದೆ ಎಂದರು.
ಮುಂದಿನ ವರ್ಷ 1300 ಕೋಟಿ ಠೇವಣಿ ಹಾಗೂ 1100 ಕೋಟಿ ಸಾಲವನ್ನು ನೀಡುವ ಯೋಜನೆಯನ್ನು ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಕೇಂದ್ರ ಬ್ಯಾಂಕಿನ 21 ಶಾಖೆಗಳು ಕೊಡಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್ ಆರ್ ಸುರೇಶ್ ರವರ ಅಧ್ಯಕ್ಷತೆಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಹರೀಶ್ ಪೊಯ್ಯನವರು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರು ಆಡಳಿತ ಮಂಡಳಿ ಸದಸ್ಯರು ಮತ್ತು ಇತರ ಉಪಸ್ಥಿತರಿದ್ದರು.