News Karnataka Kannada
Saturday, May 11 2024
ಮಡಿಕೇರಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಖಂಡನೆ

Kodagu District Congress Committee Condemns Praveen Nettaru's Murder
Photo Credit : By Author

ಮಡಿಕೇರಿ, ಜು.27: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಟಿ.ಈ.ಸುರೇಶ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹತ್ಯೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎನ್ನುವುದಕ್ಕೆ ಸರ್ಕಾರದ ವೈಫಲ್ಯತೆಯ ವಿರುದ್ಧ ಸ್ವತ: ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆಗಿಳಿದಿರುವುದು ಸಾಕ್ಷಿಯಾಗಿದೆ. ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸ್ಥಳಕ್ಕೆ ಭೇಟಿ ನೀಡಿದ ಸಚಿವರುಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರು ದಿಕ್ಕಾರ ಕೂಗಿರುವುದು ವಿಪರ್ಯಾಸ. ಜನಸಾಮಾನ್ಯರಿಗೆ ರಕ್ಷಣೆ ನೀಡಲು ಬಿಜೆಪಿ ಸರ್ಕಾರದಿಂದ ಸಾಧ್ಯವಿಲ್ಲ ಎನ್ನುವುದು ಆಡಳಿತ ಪಕ್ಷದ ಕಾರ್ಯಕರ್ತರಿಗೆ ಅರಿವಾಗಿದೆ ಎಂದು ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಬೆಳ್ಳಾರೆ ಘಟನೆಯ ನೈತಿಕ ಹೊಣೆ ಹೊರಬೇಕು ಮತ್ತು ಪ್ರವೀಣ್ ಹತ್ಯೆ ಮಾಡಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು