ಕೊಡಗು: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿ ಯೋಗೇಶ್ ಎಂಬವರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಬೇತು ಸ.ಹಿ.ಪ್ರಾ.ಶಾಲಾ ಶಿಕ್ಷಕ ಕೆ.ಜಿ.ನಾಗೇಂದ್ರ ಎಂಬವರು ಜೈಲು ಪಾಲಾಗಿದ್ದಾರೆ.
ಪೊಲೀಸ್ ಸಿಬ್ಬಂದಿಯ ಪತಿಯಾಗಿರುವ ನಾಗೇಂದ್ರ ಪಕ್ಕದ ವಸತಿಗೃಹದಲ್ಲಿ ವಾಸವಿದ್ದ ಪೊಲೀಸ್ ಪೇದೆಯೊಂದಿಗೆ ಕಲಹ ಮಾಡಿಕೊಂಡಿದ್ದರು.
ಈ ಬಗ್ಗೆ ವಿಚಾರಿಸಲು ನವೆಂಬರ್ ತಿಂಗಳಲ್ಲಿ ಕುಶಾಲನಗರ ಪೊಲೀಸ್ ಠಾಣೆಯಿಂದ ಬರ ಹೇಳಿದ್ದ ಸಂದರ್ಭ ಠಾಣೆಗೆ ತೆರಳಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಬಾಯಿಗೆ ಬಂದಂತೆ ಬಯ್ದು ಅಲ್ಲಿಯೇ ನಿಂತಿದ್ದ ಸಿಬ್ಬಂದಿ ಯೋಗೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧಿಸಿದಂತೆ ಶಿಕ್ಷಕ ನಾಗೇಂದ್ರ ಜೈಲು ಪಾಲಾಗಿದ್ದಾರೆ.