ಕೊಡಗು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ರಹ ಜ್ಯೋತಿ ಯೋಜನೆ ಅಡಿ ಪ್ರತಿಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ,ಪ್ರತಿ ಮನೆ ಒಡತಿಗೆ ರೂ.2000 ಪ್ರೋತ್ಸಾಹ ಧನ,ನೀಡುವ ಗ್ರಹಲಕ್ಷ್ಮಿ ಯೋಜನೆ ಜಾರಿ ಹಾಗೂ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ದಾರರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹೆಚ್. ಎನ್. ಚಂದ್ರಮೌಳಿ ರವರು ಮಡಿಕೇರಿ ನಗರದ ವಿವಿಧಡೆ ವಿವಿಧ ಭರವಸೆಗಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಯ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಿದ್ದರಾಮಯ್ಯನವರ ನೇತೃತ್ವದ ಹಿಂದಿನ ಸರಕಾರ 600 ಭರವಸೆಗಳನ್ನು ನೀಡಿದ್ದು ಅದರಲ್ಲಿ 589ನ್ನು ಈಡೇರಿಸಿದೆ. ಈ ಬಾರಿಯೂ ಅವಕಾಶ ನೀಡಿದರೆ ಎಲ್ಲಾ ಭರವಸೆಗಳನ್ನು ಪೂರೈಸಲಾಗುವುದು ಎಂದರು. ಕೊಡಗಿನ ಜನ 25 ವರ್ಷಗಳು ಬಿಜೆಪಿಯನ್ನು ಸಹಿಸಿದ್ದು ಸಾಕು,ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಚಂದ್ರ ಮೌಳಿಯವರು ಕರೆ ನೀಡಿದರು.
ಕೊಡಗಿನ ಜನ ಈ ಬಾರಿ ಕಾಂಗ್ರೆಸ್ ಪರವಾಗಿ ತಮ್ಮ ಒಲವು ವ್ಯಕ್ತಪಡಿಸಿದ್ದು ಜನರ ಪರ ಸರಕಾರಕ್ಕಾಗಿ ಎಲ್ಲರೂ ಕೂಡ ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿ ದುಡಿದು ಜನಸ್ನೇಹಿ ಸರ್ಕಾರವನ್ನು ತರಬೇಕಾಗಿದೆ ಎಂದರು.
ನಗರದ ವಿವಿಧ ಬಡಾವಣೆಗಳಲ್ಲಿ ಈ ಗ್ಯಾರಂಟಿ ಕಾರ್ಡನ್ನು ವಿತರಿಸಿದರು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ ವೈ ರಾಜೇಶ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.