News Karnataka Kannada
Saturday, May 11 2024
ಮಡಿಕೇರಿ

ಕುಶಾಲ‌ನಗರ: ಕಾವೇರಿನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಣೆ

Man who attempted suicide by jumping into River Cauvery rescued
Photo Credit :

ಕುಶಾಲ‌ನಗರ: ವ್ಯಕ್ತಿಯೊಬ್ಬ ಸೇತುವೆಯಿಂದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದ್ದು, ಸ್ಥಳೀಯ ಯುವಕರು ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಗಣೇಶ ಎಂಬಾತನೇ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದವನು. ಈತ ನಗರದ ಕೊಪ್ಪ ಗಡಿಭಾಗದಲ್ಲಿ  ಕಾವೇರಿ  ನದಿಯ ಹಳೆ ಸೇತುವೆಯಿಂದ ದಿಢೀರ್ ಆಗಿ ಕಾವೇರಿ ನದಿಗೆ ಜಿಗಿದು ಆತ್ಮಹತ್ಯೆಗೆ ಮುಂದಾದನು. ನೋಡ ನೋಡುತ್ತಿದ್ದಂತೆಯೇ ನಡೆದ ಈ ಘಟನೆಯಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ಅತ್ತ ನದಿಗೆ ಹಾರಿದ ಗಣೇಶ ನೀರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದನಲ್ಲದೆ, ಈಜಿ ದಡ ಸೇರುವ ಪ್ರಯತ್ನ ಮಾಡುತ್ತಿದ್ದನು. ಈ ದೃಶ್ಯ ನೋಡಿದವರು ಮುಂದೇನು ಮಾಡುವುದೇನು ಎಂದು ಯೋಚಿಸುತ್ತಿರುವಾಗಲೇ ಆತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಬಿದಿರಿನ ಪೊದೆಯಲ್ಲಿ ಸಿಕ್ಕಿಹಾಕಿಕೊಂಡನು. ಈ ವೇಳೆ ಹೇಗಾದರೂ ಮಾಡಿ ಆತನನ್ನು ರಕ್ಷಿಸಲೇ ಬೇಕೆಂಬ ಹಠಕ್ಕೆ ಬಿದ್ದ ಸ್ಥಳೀಯರಾದ ಚಂದ್ರು ಮತ್ತು ಸ್ನೇಹಿತರು ಸಮಯ ಪ್ರಜ್ಞೆಯಿಂದ ತಕ್ಷಣವೇ ತೆಪ್ಪದೊಂದಿಗೆ ನದಿಗಿಳಿದು ಗಣೇಶನನ್ನು ರಕ್ಷಿಸಿ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

 ತುಂಬಿ ಹರಿಯುವ ನದಿ ನೀರಿನಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಗಣೇಶನನ್ನು ರಕ್ಷಿಸಿದ  ಚಂದ್ರು ಮತ್ತು ಅವರ ಸ್ನೇಹಿತರನ್ನು ನಾಗರಕರು ಶ್ಲಾಘಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಗಣೇಶನ ಇದೀಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು