ಮಡಿಕೇರಿ, ಡಿ.24: ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭ ದೆಹಲಿಗೆ ತೆರಳಿ ಕೇಂದ್ರ ಮತ್ತು ರಾಜ್ಯ ಖಾತೆಯ ಕೃಷಿ ಸಚಿವರು ಹಾಗೂ ರೈತ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ,, ಮಾಜಿ ಪ್ರಧಾನಿ ಹೆಚ್.ಡಿ,ದೇವೇಗೌಡ ಸಂಸತ್ತಿನ ವ್ಯಾವಹಾರಿಕ ಸಚಿವ ಪ್ರಹ್ಲಾದ್ ಜೋಶಿ, ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಐ.ಎಂ.ಬಸವೇಗೌಡ , ವಾಣಿಜ್ಯ ಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರವಾಲ್ ಅವರುಗಳನ್ನು ಭೇಟಿ ಮಾಡಿತು.
ಕಾಫಿಬೆಳೆಗಾರರ ಪ್ರಮುಖವಾದ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರು ಮತ್ತು ಇಲಾಖೆಯ ಪ್ರಮುಖರಿಗೆ ಮನವಿ ಮೂಲಕ ಸಲ್ಲಿಸಲಾಯಿತು.
3 ಲಕ್ಷದವರೆಗಿನ ಸಾಲ ಪಡೆದು ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುತ್ತಿರುವ ಬೆಳೆಗಾರರಿಗೆ ಶೂನ್ಯ ಬಡ್ಡಿದರದಲ್ಲಿ ಬ್ಯಾಂಕುಗಳಿಂದ ಸಾಲಸೌಲಭ್ಯ ನೀಡಲಾಗುತ್ತಿದ್ದು, ಸಾಲದ ಪ್ರಮಾಣವನ್ನು ಹೆಚ್ಚುಪಡಿಸಬೇಕು. ಕಾಫಿ ಇತರೆ ಸಾಲಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಬೇಕು. ವಾಣಿಜ್ಯ ಬ್ಯಾಂಕ್ನಿಂದ ಕಾಫಿ ಸಾಲಕ್ಕೆ ಬ್ಯಾಂಕ್ ಬಡ್ಡಿದರವನ್ನು ಕಡಿಮೆಮಾಡಬೇಕು, ಬ್ಯಾಂಕ್ ಸಾಲ ಮರುಪಾವತಿ ಅವಧಿಯನ್ನು ಹೆಚ್ಚಿಸಬೇಕು, ಕೃಷಿಯಲ್ಲೇ ತೊಡಗಿಸಿಕೊಂಡಿರುವ ರೈತರಿಗೆ ಸಿಬಿಲ್ನ್ನು ಅನ್ವಯಿಸಬಾರದು.
ಕಾಫಿಗೂ ಸಹ ಕಾಳುಮೆಣಸು , ಅಡಿಕೆಗೆ ಇರುವಂತೆ ಹವಾಮಾನಾಧಾರಿತ ಬೆಳೆವಿಮೆಯನ್ನು ಅಳವಡಿಸಬೇಕು, ಕೇಂದ್ರ ಸರ್ಕಾರದಿಂದ ಮಾನವ-ಪ್ರಾಣಿ ಸಂಘರ್ಷಕ್ಕೆ ಬಜೆಟ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹೆಚ್ಚು ಅನುದಾನವನ್ನು ನೀಡಬೇಕು. ಇದರಿಂದ ಮಾನವ-ಪ್ರಾಣಿ ಸಂಘರ್ಷವನ್ನು ಯಶಸ್ವಿಯಾಗಿ ತಡೆಗಟ್ಟಲು ಸಹಾಯವಾಗುತ್ತದೆ.
ರಾಷ್ಟ್ರೀಯ ವಿಪತ್ತು ಯೋಜನೆ (ಎನ್.ಡಿ.ಆರ್.ಎಫ್.)ಯಿಂದ ಕೊಡುತ್ತಿರುವ ಪರಿಹಾರವನ್ನು 10 ಹೆಕ್ಟೇರ್ ವರೆಗೆ ವಿಸ್ತರಿಸಬೇಕು ಮತ್ತು ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದರು.
ಕನಾ೯ಟಕ ಬೆಳೆಗಾರರ ಒಕ್ಕೂಟದ ನಿಯೋಗದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ. ಹೆಚ್.ಟಿ. ಮೋಹನ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಕೆ. ವಿಶ್ವನಾಥ್ ಇದ್ದರು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಚ್.ಬಿ. ಕೖಷ್ಣಪ್ಪ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…