ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಕೆ.ಜಿ ಬೋಪಯ್ಯನವರು ಇಂದು ವಿರಾಜಪೇಟೆಯಲ್ಲಿ ನಾಮಪತ್ರ ಸಲ್ಲಿಸಿದರು.
ವಿರಾಜಪೇಟೆ ಪಟ್ಟಣದಲ್ಲಿ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ನಂತರ ತಾಲೂಕು ಕಚೇರಿಯಲ್ಲಿ ಸ್ಥಾಪಿಸಲಾದ ಚುನಾವಣಾ ಕೇಂದ್ರದಲ್ಲಿ ಚುನಾವಣಾ ಅಧಿಕಾರಿ ಶಬಾನ ಎಂ ಶೇಕ್ಅವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಸುಜ ಕುಶಲಪ್ಪ, ರಘು ನಾಣ್ಣಯ್ಯ, ಜಿಲ್ಲಾಧ್ಯಕ್ಷರಾದ ರಾಬಿನ್ ದೇವಯ್ಯ,ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವ ಸಂದರ್ಭ ಪತ್ರಕರ್ತರಿಗೆ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಹೊರಗಡೆ ಬಾಗಿಲಲ್ಲಿ ಫೋಟೋ ತೆಗಿಯುವ ಪರಿಸ್ಥಿತಿ ನಿರ್ಮಾಣವಾಯಿತು. ಈ ಬಗ್ಗೆ ಪ್ರಶ್ನಿಸಿದಾಗ ಮೂರು ಗಂಟೆಯ ನಂತರ ಹೊರಗಿನ ನಾಮಫಲಕದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗುವುದು ಎಂದು ಚುನಾವಣಾ ಅಧಿಕಾರಿಗಳು ಪತ್ರಕರ್ತರಿಗೆ ಸಹಕಾರ ನೀಡದೆ ಇರುವ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.