ಮಡಿಕೇರಿ: ತಮ್ಮ ಸೇವೆ ಕಾಯಂಗೊಳಿಸಬೇಕು, 15 ಸಾವಿರ ರೂ. ಪ್ರೋತ್ಸಾಹಧನ ಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಶುಕ್ರವಾರ ಡಿಹೆಚ್ಒ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2016-17ನೇ ಸಾಲಿನಿಂದ ಸಮುದಾಯ ಆರೋಗ್ಯ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಪ್ರಾಥಮಿಕ ಸಮಗ್ರ 12 ಆರೋಗ್ಯ ಸೇವೆಗಳನ್ನು ಹೊರತುಪಡಿಸಿ ಇಲಾಖೆಯ ಬೇರೆ ಬೇರೆ ಕೆಲಸಗಳಲ್ಲಿ ದುಡಿಸಿಕೊಳ್ಳಲಾಗುತ್ತಿದೆ. ಆರೋಗ್ಯ ಕೇಂದ್ರದ ಸ್ವಚ್ಛತೆಯನ್ನು ಅಧಿಕಾರಿಗಳೇ ತಮ್ಮ ಸ್ವಂತ ಹಣ ಹಾಕಿ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಬೇರೆ ರಾಜ್ಯಗಳಲ್ಲಿ 15 ಸಾವಿರ ರೂ. ಪ್ರೋತ್ಸಾಹಧನ ಇದ್ದರೂ ಕರ್ನಾಟಕದಲ್ಲಿ ಕೇವಲ 8 ಸಾವಿರ ರೂ. ಮಾತ್ರ ಕೊಡಲಾಗುತ್ತಿದೆ ಎಂದು ಪ್ರತಿಭಟನಾ ನಿರತರು ಡಿಹೆಚ್ಒ ಡಾ. ವಂಕಟೇಶ್ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕುಮಾರ್ ಕೆ.ಸಿ., ತಮ್ಮ ಕೆಲಸಕ್ಕೆ ಅಡ್ಡಿ ಆಗುವ ಕಿರುಕುಳಗಳನ್ನು ನಿಲ್ಲಿಸಬೇಕು. ಉದ್ದೇಶಪೂರ್ವಕವಾಗಿ ಗ್ರಾಮೀಣ ಸೇವೆಯಿಂದ ಡೈವರ್ಟ್ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸರಕಾರದ ಮಹತ್ವದ ಯೋಜನೆಯಲ್ಲಿ ದುಡಿಯುತ್ತಿರುವ ಪದವೀಧರ ಮತ್ತು ಪರಿಣಿತ ಆರೋಗ್ಯ ಅಧಿಕಾರಿಗಳನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಮನವಿ ಮಾಡುತ್ತಿರುವುದಾಗಿ ತಿಳಿಸಿದರು.
ತಮ್ಮ ಬೇಡಿಕೆಗಳು ಇರುವ ಮನವಿಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ಡಿಹೆಚ್ಒ ಮುಖಾಂತರ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಿಗೆ ಕಳುಹಿಸಿಕೊಟ್ಟರು. ಆರ್ಸಿಹೆಚ್ಒ ಡಾ. ಗೋಪಿನಾಥ್, ಡಿಪಿಸಿ ಡಾ. ಶಾಂಭವಿ ಈ ವೇಳೆ ಇದ್ದರು. ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕುಮಾರ್ ಕೆ.ಸಿ., ಉಪಾಧ್ಯಕ್ಷೆ ರಮ್ಯಾ ವಿ., ಪ್ರಧಾನ ಕಾರ್ಯದರ್ಶಿ ದೀಪು ಎಸ್.ಆರ್., ಮಿಲನ್ ಕೆ.ಪಿ., ಸಹಕಾರ್ಯದರ್ಶಿ ವಿಕ್ರಂ ಎ.ಯು., ಖಜಾಂಚಿಗಳಾದ ಪ್ರಿಯಾ ಎ.ಎಂ., ಮನು ಎನ್. ಪದಾಧಿಕಾರಿಗಳಾದ ಪುಷ್ಪಾ ವಸಂತ್
ಬಡಿಗೇರ್, ವಿದ್ಯಾ ಬಿ.ಆರ್., ಧರಣೇಶ್ ಜೆ.ಡಿ., ಬ್ರಿಜೇಶ್ ಬಿ.ಎನ್., ಭರತ್ ಎಸ್.ಎಲ್., ಶಶಿಧರ್ ಹೆಚ್.ಆರ್., ಸುನಿಲ್ ಎ.ಎಸ್., ಭವ್ಯಾ ಕೆ.ಕೆ.,ದುಶ್ಯಂತ್ ಪಿ.ವಿ., ವನಿತಾ, ಸಂಜಯ್, ಸಿಂಧು ಸೇರಿದಂತೆ ಜಿಲ್ಲೆಯಾದ್ಯಂತ ಸೇವೆ ಸಲ್ಲಿಸುತ್ತಿರುವ 130 ಮಂದಿ ಸಮುದಾಯ ಆರೋಗ್ಯ ಅಧಿಕಾರಿಗಳು
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಹಣಕಾಸು ಸಚಿವೆ…
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.