ಮಡಿಕೇರಿ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯಾವ ಧರ್ಮವೂ ಹಿಂಸೆಯನ್ನು ಬೆಂಬಲಿಸುವುದಿಲ್ಲ, ಆದರೆ ಉದಯಪುರದಲ್ಲಿ ಧರ್ಮದ ಹೆಸರಿನಲ್ಲಿ ಎಸಗಿರುವ ಅಮಾನವೀಯ ಕೃತ್ಯ ಘೋರ ಅಪರಾಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಸರಕಾರ ಮುನ್ನೆಚ್ಚರಿಕೆ ವಹಿಸಬೇಕು. ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ತಡೆಯಲು ಪೊಲೀಸ್ ಮತ್ತು ಕಾನೂನು ವ್ಯವಸ್ಥೆಯನ್ನು ಬಿಗಿಗೊಳಿಸಬೇಕೆಂದು ಉಸ್ಮಾನ್ ಹಾಗೂ ಪೀಟರ್ ಒತ್ತಾಯಿಸಿದ್ದಾರೆ.