News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿ: ಧರ್ಮಗುರುವಿನ ಮೇಲೆ ಹಲ್ಲೆ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಖಂಡನೆ

Madikeri: Congress minority wing condemns attack on cleric
Photo Credit : By Author

ಮಡಿಕೇರಿ: ಕಾಕೋಟುಪರಂಬು ಬಳಿ ಧರ್ಮಗುರುವಿನ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ಪ್ರಧಾನ ಕಾರ್ಯದರ್ಶಿ ಸೈಯದ್ ಬಾವ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಧರ್ಮಗುರುವಿನ ಮೇಲೆ ಹಲ್ಲೆ ಮಾಡಿ ಅವರ ಪತ್ನಿ ಹಾಗೂ ಮಕ್ಕಳ ಮೇಲೂ ಹಲ್ಲೆ ಯತ್ನ ನಡೆಸಿರುವ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಆ ಮೂಲಕ ಇನ್ನು ಮುಂದೆ ಜಿಲ್ಲೆಯಲ್ಲಿ ಈ ರೀತಿಯ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.

ಶಾಂತಿ, ಸೌಹಾರ್ದತೆ ನೆಲೆಸಿರುವ ಕೊಡಗಿನಲ್ಲಿ ಅಶಾಂತಿ ಮೂಡಿಸಲು ಕಿಡಿಗೇಡಿಗಳು ಯತ್ನಿಸುತ್ತಿದ್ದು, ಪೊಲೀಸರು ಸೂಕ್ತ ತನಿಖೆ ನಡೆಸಿ ಈ ಪ್ರಯತ್ನಗಳನ್ನು ವಿಫಲಗೊಳಿಸಬೇಕೆಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು