ಮಡಿಕೇರಿ

ಮಡಿಕೇರಿ: ಪೌರಕಾರ್ಮಿಕರ ಮುಷ್ಕರಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬೆಂಬಲ

ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪೌರ ಕಾರ್ಮಿಕರು ಕಳೆದ 5 ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಬೆಂಬಲ ಸೂಚಿಸಿದೆ.

ಮಡಿಕೇರಿ ನಗರಸಭೆ ಎದುರು ಪ್ರತಿಭಟನೆ ನಡೆಸುತ್ತಿರುವ ಪೌರ ಕಾರ್ಮಿಕರನ್ನು ಭೇಟಿಯಾದ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೆ ಸಮಸ್ಯೆಗಳನ್ನು ಆಲಿಸಿ ಸರಕಾರ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರ ಕಾರ್ಮಿಕರನ್ನು ಎಲ್ಲಾ ನೌಕರರಂತೆ ಪರಿಗಣಿಸದೆ ಕಡೆಗಣಿಸಲಾಗುತ್ತಿದೆ. ದುಡಿಮೆಗೆ ತಕ್ಕ ವೇತನ ನೀಡದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.

ಮಳೆ, ಗಾಳಿ, ಚಳಿ, ಬಿಸಿಲೆನ್ನದೆ ನಗರದ ಸ್ವಚ್ಛತೆಗಾಗಿ ಮತ್ತು ಜನರ ಹಿತಕ್ಕಾಗಿ ನಿತ್ಯ ದುಡಿಯುವ ಪೌರ ಕಾರ್ಮಿಕರ ಜೀವನಕ್ಕೆ ಭದ್ರತೆ ಇಲ್ಲದಾಗಿದೆ. ಮೂಲಭೂತ ಸೌಲಭ್ಯ, ಆರೋಗ್ಯ ರಕ್ಷಣೆ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸದೆ ಅತಂತ್ರಗೊಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಸ ಸಾಗಿಸುವ ವಾಹನ ಚಾಲಕರು, ನಿರ್ವಾಹಕರು, ಕಸ ತುಂಬಿಸುವವರು, ಕಸ ವಿಂಗಡಿಸುವವರು ಹಾಗೂ ಒಳಚರಂಡಿ ಕಾರ್ಮಿಕರನ್ನು ಪೌರ ಕಾರ್ಮಿಕರೆಂದು ಘೋಷಿಸಿ ಪೌರಕಾರ್ಮಿಕರಿಗೆ ನೀಡುವ ಸ್ಥಾನಮಾನ, ಭತ್ಯೆ ಮತ್ತು ವೇತನ ನೀಡಬೇಕು. ವೇತನ ನೇರ ಪಾವತಿಗೆ ಕ್ರಮ ಕೈಗೊಂಡು ಖಾಯಂಗೊಳಿಸಬೇಕೆನ್ನುವ ಒತ್ತಾಯ ನ್ಯಾಯಸಮ್ಮತವಾಗಿದೆ. ಕುಡಿಯುವ ನೀರು ಸರಬರಾಜು ಸಿಬ್ಬಂದಿ ಹಾಗೂ ಕಚೇರಿ ಕಾರ್ಯನಿರ್ವಹಿಸುವ ಡಾಟ ಆಪರೇಟರುಗಳ ಗುತ್ತಿಗೆ ಆಧಾರದ ಸೇವೆಯನ್ನು ರದ್ದುಪಡಿಸಿ ನೇರವೇತನ ಜಾರಿಗೊಳಿಸಿ ಖಾಯಂಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆನ್ನುವ ಬೇಡಿಕೆ ನ್ಯಾಯಯುತವಾಗಿದೆ. ಆದ್ದರಿಂದ ಸರಕಾರ ತಕ್ಷಣ ಬೇಡಿಕೆ ಈಡೇರಿಸಲು ಮುಂದಾಗಬೇಕೆಂದು ಪೀಟರ್ ಒತ್ತಾಯಿಸಿದರು.

ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರಕಾರ್ಮಿಕರ ದುಡಿಮೆ ಶ್ರೇಷ್ಠವಾಗಿದೆ. ಇವರಿಗೆ ಚಂದ್ರನನ್ನು ತೋರಿಸಿ ಊಟ ನೀಡುವಂತೆ ಅಲ್ಪವೇತನ ನೀಡಿ ದುಡಿಸಿಕೊಳ್ಳುವುದು ಅಪರಾಧವಾಗಿದೆ. ಸ್ವಚ್ಛತೆಯ ಮೂಲಕ ಇಡೀ ಸಮಾಜದ ಆರೋಗ್ಯ ಕಾಪಾಡುವ ಪೌರಕಾರ್ಮಿಕರಿಗೆ ಹೆಚ್ಚಿನ ವೇತನವನ್ನು ಸರಕಾರ ಘೋಷಿಸಬೇಕೆಂದು ಆಗ್ರಹಿಸಿದರು.

 

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago