Categories: ಮಡಿಕೇರಿ

ಮಡಿಕೇರಿ: ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ, ಸ್ಥಳ ಪರಿಶೀಲನೆ

ಮಡಿಕೇರಿ, ಜ.12: ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹುಬ್ಬಳ್ಳಿಯ ಸಂಕಲ್ಪ ಗ್ರೂಪ್‍ನ ಕಟ್ಟಡ ವಾಸ್ತುಶಿಲ್ಪಿ ಮುಖ್ಯಸ್ಥರಾದ ಮಹೇಶ್ ಹಿರೇಮಠ ಹಾಗೂ ಸುಷ್ಕಮ ಅವರು ಗುರುವಾರ ಸ್ಥಳ ವೀಕ್ಷಿಸಿದರು.

ನಗರದ ಹೊರ ವಲಯದ ಕೆ.ನಿಡುಗಣೆ ಗ್ರಾ.ಪಂ.ವ್ಯಾಪ್ತಿಯಲ್ಲಿರುವ ಜಾಗವನ್ನು ಪರಿಶೀಲಿಸಿದರು. ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯಲ್ಲಿ 3 ಎಕರೆ ಜಾಗವಿದ್ದು, ಅದರ ಪಕ್ಕದಲ್ಲಿರುವ ಸರ್ಕಾರಿ ಜಾಗವನ್ನು ಸಹ ಗಡಿ ಗುರುತಿಸಿ ಡಿಜಿಟಲ್ ಸರ್ವೇ ಮಾಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಜಿಲ್ಲಾ ಕೇಂದ್ರದಲ್ಲಿ ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ನಿರ್ಮಾಣ ಮಾಡಬೇಕಿದೆ ಆ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮವಹಿಸಬೇಕು ಎಂದರು.

ಹುಬ್ಬಳ್ಳಿಯ ಸಂಕಲ್ಪ ಗ್ರೂಪ್‍ನ ಕಟ್ಟಡ ವಾಸ್ತುಶಿಲ್ಪಿ ಮುಖ್ಯಸ್ಥರಾದ ಮಹೇಶ್ ಹಿರೇಮಠ ಅವರು ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಜಾಗವನ್ನು ಸರ್ವೇ ಮಾಡಿಸಿ ಗಡಿ ಗುರುತಿಸಬೇಕು. ನಂತರ ಮತ್ತೊಂದು ಸಾರಿ ವೀಕ್ಷಣೆ ಮಾಡಿ ಅಂತಿಮಗೊಳಿಸಲಾಗುವುದು ಎಂದರು.

ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಅವರು ಮಾತನಾಡಿ 5 ಕೋಟಿ ರೂ. ವೆಚ್ಚದಲ್ಲಿ ಮಿನಿ ತಾರಾಲಯ ಮತ್ತು 4 ಕೋಟಿ ರೂ. ವೆಚ್ಚದಲ್ಲಿ ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣ ಮಾಡಬೇಕಿದೆ. ಆ ನಿಟ್ಟಿನಲ್ಲಿ ತ್ವರಿತವಾಗಿ ಕಾರ್ಯಗಳು ಆಗಬೇಕು ಎಂದು ಕೋರಿದರು.

ಬಳಿಕ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಸಂಬಂಧ ರೂಪುರೇಷೆ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯಿತು.

ಹುಬ್ಬಳ್ಳಿಯ ಸಂಕಲ್ಪ ಗ್ರೂಪ್‍ನ ಕಟ್ಟಡ ವಾಸ್ತುಶಿಲ್ಪಿ ಮುಖ್ಯಸ್ಥರಾದ ಮಹೇಶ್ ಹಿರೇಮಠ ಅವರು ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಪ್ರಾರಂಭವಾಗುವುದರಿಂದ ವಿದ್ಯಾರ್ಥಿಗಳಿಗೆ, ವಿಜ್ಞಾನಿಗಳಿಗೆ, ಶಿಕ್ಷಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಕುಶಾಲನಗರ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶೀನಪ್ಪ, ತಹಶೀಲ್ದಾರ್ ಪಿ.ಎಸ್.ಮಹೇಶ್, ಡಿಜಿಟಲ್ ಸರ್ವೇ ವಿಭಾಗದ ಕೆ.ಸಿ.ಬಿನೇಶ್, ಕಂದಾಯ ನಿರೀಕ್ಷಕರಾದ ರುದ್ರೇಶ್ ಇತರರು ಇದ್ದರು.

Gayathri SG

Recent Posts

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

16 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

32 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

52 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

2 hours ago