ಮಡಿಕೇರಿ,ಸೆ.28: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿ ಅದ್ದೂರಿಯಾಗಿ ನಡೆಯುತ್ತಿದ್ದು, ವಾಹನಗಳು ಹಾಗೂ ವಿವಿಧ ಕಟ್ಟಡಗಳನ್ನು ಅಲಂಕಾರಗೊಳಿಸಿ ಹಬ್ಬದ ಮೆರಗನ್ನು ಹೆಚ್ಚಿಸಬೇಕೆಂದು ಮಡಿಕೇರಿ ದಸರಾ ಜನೋತ್ಸವ ಅಲಂಕಾರ ಸಮಿತಿ ಮನವಿ ಮಾಡಿದೆ.
ಆಯುಧಪೂಜೆ ದಿನವಾದ ಅ.4 ರಂದು ಅಲಂಕೃತ ವಾಹನಗಳು ಸಂಜೆ 6.30 ಗಂಟೆಯೊಳಗೆ ಗಾಂಧಿ ಮೈದಾನಕ್ಕೆ ಬರಬೇಕು. ತೀರ್ಪುಗಾರರು ಸ್ಥಳಕ್ಕೆ ಆಗಮಿಸಿ ಆಕರ್ಷಕ ವಾಹನಗಳನ್ನು ಬಹುಮಾನಕ್ಕಾಗಿ ವಿವಿಧ ವಿಭಾಗಗಳಲ್ಲಿ ಆಯ್ಕೆ ಮಾಡಲಿದ್ದಾರೆ. ಸೈಕಲ್, ಲಾರಿ, ಬಸ್, ಜೆಸಿಬಿ ಸೇರಿದಂತೆ ಎಲ್ಲಾ ರೀತಿಯ ವಾಹನಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು ಎಂದು ಸಮಿತಿಯ ಅಧ್ಯಕ್ಷ ನಂದೀಶ್ ಕುಮಾರ್ ಹಾಗೂ ಕಾರ್ಯದರ್ಶಿ ಹರೀಶ್ ತಿಳಿಸಿದ್ದಾರೆ.
ಕಟ್ಟಡ ಅಲಂಕಾರ
ವಿಜಯದಶಮಿಯ ದಿನವಾದ ಅ.5 ರಂದು ಸಂಜೆ 6.30 ಗಂಟೆಯೊಳಗೆ ಕಟ್ಟಡಗಳ ಅಲಂಕಾರ ಪೂರ್ಣಗೊಳಿಸಬೇಕು. ತೀರ್ಪುಗಾರರು ಸ್ಥಳಕ್ಕೆ ಆಗಮಿಸಿ ಆಕರ್ಷಕ ಕಟ್ಟಡ ಹಾಗೂ ಮಳಿಗೆಗಳನ್ನು ಬಹುಮಾನಕ್ಕಾಗಿ ವಿವಿಧ ವಿಭಾಗಗಳಲ್ಲಿ ಆಯ್ಕೆ ಮಾಡಲಿದ್ದಾರೆ. ವಾಣಿಜ್ಯ ಸಂಕೀರ್ಣಗಳು, ಹೊಟೇಲ್, ಅಂಗಡಿ, ಮಳಿಗೆಗಳು, ಸರ್ಕಾರಿ ಕಟ್ಟಡ, ಅರೆ ಸರ್ಕಾರಿ ಕಟ್ಟಡ, ಸಹಕಾರಿ ಕಟ್ಟಡ ಸೇರಿದಂತೆ ಎಲ್ಲಾ ಬಗೆಯ ಕಟ್ಟಡಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಹೆಚ್ಚಿನ ಮಾಹಿತಿಗಾಗಿ ನಂದೀಶ್ ಕುಮಾರ್ (9480325167) ಹಾಗೂ ಹರೀಶ್ (9448585470) ಅವರನ್ನು ಸಂಪರ್ಕಿಸಬಹುದಾಗಿದೆ.