Categories: ಮಡಿಕೇರಿ

ಮಡಿಕೇರಿ: ಫೆ.4ರಂದು ಅಶ್ವಿನಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಅಶ್ವಿನಿ ಆಸ್ಪತ್ರೆ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಯೋಗ್ ಆಸ್ಪತ್ರೆ, ವಾಕ್ ಮತ್ತು ಶ್ರವಣ ಇನ್ ಪ್ಲಾಂಟ್ ಕ್ಲಿನಿಕ್ ಹಾಗೂ ಜಸ್ಟೀಸ್ ಕೆ.ಎಸ್. ಹೆಗಡೆ ಸ್ಮಾರಕ ದಂತ ವಿಭಾಗದ ಸಹಯೋಗದಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ ಶನಿವಾರ (ಫೆ.4) ಆರೋಗ್ಯ ತಪಾಸಣಾ ಉಚಿತ ಶಿಬಿರ ಏರ್ಪಡಿಸಿದ್ದು, ಸಭಾ ಕಾರ್ಯಕ್ರಮ ಅಂದು ಬೆಳಗ್ಗೆ 11.30ಕ್ಕೆ ಆಸ್ಪತೆ ಆವರಣದಲ್ಲಿ ನಡೆಯಲಿದೆ.

ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ.ರಾಜೇಂದ್ರ ಮತ್ತು ಭಾರತೀಯ ವಿದ್ಯಾಭವನ, ಕೊಡಗು ಕೇಂದ್ರದ ಅಧ್ಯಕ್ಷ, ಅಶ್ವಿನಿ ಆಸ್ಪತ್ರೆ ಸಲಹಾ ಸಮಿತಿ ಸದಸ್ಯ ಕೆ.ಎಸ್. ದೇವಯ್ಯ ಉದ್ಘಾಟಿಸುವರು.

ಮಡಿಕೇರಿ ಅಶ್ವಿನಿ ಆಸ್ಪತ್ರೆ ವಿಶ್ವಸ್ಥ ಎಂ.ಸಿ. ಗೋಖಲೆ, ಕಾರ್ಯದರ್ಶಿ ಕುಪ್ಪಂಡ ರಾಜಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಆರೋಗ್ಯ ಸಮಿತಿ ಸಂಚಾಲಕ ಎಂ.ಅಬ್ದುಲ್ಲಾ, ಮಡಿಕೇರಿ ವಾಕ್ ಮತ್ತು ಶ್ರವಣ ಇನ್ ಪ್ಲಾಂಟ್ ಕ್ಲಿನಿಕ್ ಸಮನ್ವಯಕಾರ ಜೇರುಸ್ ಥಾಮಸ್ ಅಲೆಗ್ಸಾಂಡರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gayathri SG

Recent Posts

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

13 mins ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

1 hour ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

1 hour ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

1 hour ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

1 hour ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

2 hours ago