ಮಡಿಕೇರಿ: ಕಳೆದ ಒಂದು ತಿಂಗಳಿಂದ ಸಂಚಾರಕ್ಕೆ ನಿರ್ಬಂಧ ಹೇರಿದ ಗೋಣಿಕೊಪ್ಪಲು ಬೈಪಾಸ್ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ಶಾಸಕ ಕೆ ಜಿ ಬೋಪಯ್ಯ ಕಾಮಗಾರಿ ಪೂರ್ಣಗೊಂಡ ರಸ್ತೆಯನ್ನು ಉದ್ಘಾಟಿಸುವ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಒಟ್ಟು 55 ಲಕ್ಷ ರೂಪಾಯಿ ಅನುದಾನದಲ್ಲಿ.3.20 ಮೀಟರ್ ರಸ್ತೆ ಕಾಂಕ್ರೀಟ್ ಹಾಗೂ 5 ಲಕ್ಷ ವೆಚ್ಚದಲ್ಲಿ ಡಾಮರೀಕರಣ ನಡೆದಿದೆ. ನೂತನವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಗೊಂಡ ಸೌಮ್ಯ ಬಾಲು ರವರ ಪ್ರಥಮ ಕಾರ್ಯಕ್ರಮಕ್ಕೆ ಹಲವು ಗಣ್ಯರು ಭಾಗವಹಿಸಿದ್ದರು.
ಗ್ರಾಮ ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬೋಪಣ್ಣ, ಅರುಣ್ ಭೀಮಯ್ಯ,ಮಾಜಿ ಅಧ್ಯಕ್ಷರುಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬಿಜೆಪಿ ಪಕ್ಷದ ಮುಖಂಡರು ಮತ್ತಿತರು ಉಪಸ್ಥಿತರಿದ್ದರು.