ಮಡಿಕೇರಿ: ಹುದಿಕೇರಿ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣನವರ ಸ್ವಗ್ರದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಹುದಿಕೇರಿ ವ್ಯಾಪ್ತಿಯ ಹಲವರು ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹಿರಿಯರಾದ ಚೆಕೇರಾ ಸೋಮಯ್ಯ, ಪಿ.ಕೆ ಪೊನ್ನಪ್ಪ. ತಾಲೂಕು ಅಧ್ಯಕ್ಷ ಮಿದೇರಿರಾ, ನವೀನ್ ವಿರಾಜ್ ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪಕ್ಷಕ್ಕೆ ಸೇರ್ಪಡೆಗೊಂಡವರಿಗೆ ಕಾಂಗ್ರೆಸ್ ಪಕ್ಷದ ಸಾಲು ಹೊದಿಸಿ ಆತ್ಮೀಯವಾಗಿ ಎ.ಎಸ್ ಪೊನ್ನಣ್ಣನವರು ಬರಮಾಡಿಕೊಂಡರು.