News Karnataka Kannada
Friday, May 03 2024
ಮಡಿಕೇರಿ

ಮಡಿಕೇರಿ: ಸಿದ್ದಾಪುರ ಸರಕಾರಿ ಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ

Madikeri: Kannada Sahitya Parishat Endowment Lecture programme at Siddapura Government School
Photo Credit : By Author

ಮಡಿಕೇರಿ, ಸೆ.27: ಸಿದ್ದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕಿ ಪ್ರೇಮ ಕುಮಾರಿ ಕನ್ನಡವು ಜ್ಯೋತಿ ಬೆಳಗಿದಂತೆ. ಅದರ ಪ್ರಕಾಶ ಎಲ್ಲೆಡೆ ಪಸರಿಸಲಿ ಎಂದರು.

ಕನ್ನಡವು ನಮ್ಮ ಮೆಚ್ಚಿನ ಭಾಷೆ, ಕನ್ನಡವನ್ನು ಪ್ರೀತಿಸಬೇಕು ಆಗ ಮಾತ್ರ ಕನ್ನಡ ಬೆಳೆಯುತ್ತದೆ. ಕುವೆಂಪು ಅವರ ನುಡಿಯಂತೆ ಕನ್ನಡ ಭಾಷೆಯು ತಾಯಿ ಹಾಲು ಕುಡಿದಂತೆ, ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುವುದು. ಕನ್ನಡಕ್ಕಾಗಿ ಕೊರಳೆತ್ತು. ನಿನ್ನ ಕೊರಳು ಪಾಂಚ ಜನ್ಮವಾಗುವುದು ಎಂದು ತಿಳಿಸಿದರು.

ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಕೊಡಗು ಕೊಡವರ ಆಚಾರ, ವಿಚಾರ, ವೇಷ, ಭೂಷಣಗಳನ್ನು ಪ್ರತಿಬಿಂಬಿಸುತ್ತದೆ. ಕೊಡಗಿನ ಯೋಧರು ದೇಶವನ್ನು ಕಾಯುವವರು. ಅವರಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ 1918ರಲ್ಲಿ ಸೇನೆಗೆ ಸೇರಿ ಉನ್ನತ ಅಧಿಕಾರಿಯಾಗಿ ಸಹಾಯ ಮತ್ತು ಪ್ರೀತಿ ಸಹನೆ ಮೂಲಕ ಯುದ್ಧವನ್ನು ಗೆದ್ದರು. ಸಮಯ ಪಾಲನೆ, ಸ್ವಚ್ಛತೆ ಅವರ ಗುಣಗಳಲ್ಲಿ ಒಂದು. ಸಮಾಜ ಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡವರು. 1948 ಜನವರಿ 8 ರಂದು ನಮ್ಮ ದೇಶದ ಮೂರು ದಳದ ದಂಡನಾಯಕರಾದರು. 1986ರಲ್ಲಿ ಫೀಲ್ಡ್ ಮಾರ್ಷಲ್ ಪದವಿ ನೀಡಲಾಯಿತು ಎಂದರು.

ಕಸಾಪ ಕೋಶಾಧಿಕಾರಿ ಶಬರೀಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸಂಯಮ, ಸಮಯ ಪಾಲನೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಯಾಗುವ ಮೂಲಕ ದೇಶಕ್ಕೆ ಹಾಗೂ ತಂದೆ ತಾಯಿಗೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಹಳೆ ವಿದ್ಯಾರ್ಥಿಯಾಗಿ ತಮ್ಮ ಅನುಭವವನ್ನು ಹಂಚಿಕೊಂಡರು.
ಶಾಲೆಯ ಸಹ ಶಿಕ್ಷಕ್ಷಿ ಸಿ.ಸಿ.ಕೋಮಲ ಸ್ವಾಗತಿಸಿದರು. ವಿರಾಜಪೇಟೆ ಕಸಪಾ ಗೌರವ ಕಾರ್ಯದರ್ಶಿ ಟಾಮಿ ಥೋಮಸ್ ನಿರೂಪಿಸಿದರು. ಶಿಕ್ಷಕಿ ನಿರ್ಮಾಲ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು