News Karnataka Kannada
Saturday, May 04 2024
ಮಡಿಕೇರಿ

ಮಡಿಕೇರಿ: ಸೆ.26 ರಂದು ಸಂಜೆ 5 ಗಂಟೆಯಿಂದ ಕರಗೋತ್ಸವ ಆರಂಭ

Karagasthotsava will begin on Sept. 26 at 5 pm.
Photo Credit : By Author

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಸೆ.26 ರಂದು ಕರಗೋತ್ಸವದ ಮೂಲಕ ಆರಂಭಗೊಳ್ಳಲಿದ್ದು, ಸಂಪ್ರದಾಯದಂತೆ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಜಿ.ವಿ.ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಪ್ರಧಾನ ಅರ್ಚಕ ಎಂ.ಬಾಲಕೃಷ್ಣ, ಶ್ರೀದಂಡಿನ ಮಾರಿಯಮ್ಮ ದೇವಾಲಯದ ಪಿ.ಎ.ಲೋಕನಾಥ್, ಜಿ.ಎ.ಉಮೇಶ್, ಶ್ರೀಕೋಟೆ ಮಾರಿಯಮ್ಮ ದೇವಾಲಯದ ಪಿ.ಬಿ.ಅನೀಶ್ ಕುಮಾರ್ ಹಾಗೂ ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಪಿ.ಎಂ.ನವೀನ್ ಕುಮಾರ್ ಮತ್ತಿತರ ಪ್ರಮುಖರು ಕರಗೋತ್ಸವ ಮತ್ತು ಕರಗಗಳ ನಗರ ಸಂಚಾರದ ಕುರಿತು ಚರ್ಚಿಸಿದರು.

ಸೆ.26 ರಂದು ಮಧ್ಯಾಹ್ನ ನಾಲ್ಕೂ ಶಕ್ತಿ ದೇವತೆಗಳ ದೇವಾಲಯಗಳಿಂದ ಪಂಪಿನ ಕೆರೆಗೆ ತೆರಳುವುದು. ಸಂಪ್ರದಾಯದತೆ ಕರಗ ಕಟ್ಟಿ ವಿಶೇಷ ಪೂಜೆ ಸಲ್ಲಿಸಿ ಸಂಜೆ ನಗರ ಸಂಚಾರ ಆರಂಭಿಸುವುದು. ಮಳೆಯ ವಾತಾವರಣವಿರುವ ಕಾರಣ ಸಂಜೆ 5 ಗಂಟೆಗೆ ನಗರ ಸಂಚಾರ ಆರಂಭಿಸಲು ನಿರ್ಣಯಿಸಲಾಯಿತು. ಕರಗ ದೇವಾಲಯಗಳಿಗೆ ತಲಾ ಎರಡು ಲಕ್ಷ ರೂ. ಅನುದಾನ ನೀಡುತ್ತಿದ್ದು, ಈ ಮೊತ್ತವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿ ಬೇಡಿಕೆ ಮಂಡಿಸಲು ಸಭೆ ನಿರ್ಧಾರ ಕೈಗೊಂಡಿತು.

ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು