News Karnataka Kannada
Friday, May 10 2024
ಮಡಿಕೇರಿ

ಮಡಿಕೇರಿ: ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Madikeri: Kushalnagar Taluk Journalists' Association's swearing-in ceremony and Pratibha Puraskar programme
Photo Credit : By Author

ಮಡಿಕೇರಿ, ಸೆ.21: ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆ.24ರಂದು ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ನಡೆಯಲಿದೆ.

ಕೊಡಗು ಪತ್ರಕರ್ತರ ಸಂಘ(ರಿ)ದ ಅಧ್ಯಕ್ಷ ಮುರುಳೀಧರ್ ಅಧ್ಯಕ್ಷತೆ ವಹಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತಶಯನ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲಾಡಳಿತದ ಕಾನೂನು ಸಲಹೆಗಾರರಾದ ಎ.ಲೋಕೇಶ್ ಕುಮಾರ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಕೃತಗ್ಯತಾ ಟ್ರಸ್ಟ್ ನ ಮುರುಳೀಧರ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ. ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ನಿಯೋಜಿತ ಅಧ್ಯಕ್ಷ ವಿಘ್ನೇಶ್ ಎಂ. ಭೂತನಕಾಡು, ಮುಖ್ಯ ಅತಿಥಿಗಳಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯ ವರ್ಧನ್, ಮಡಿಕೇರಿಯ ಆಲ್ಫಾ ಟೆಕ್ನಾಲಜಿಯ ಹೆನ್ರಿಕ್ ಮಾರ್ಟಿನ್, ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನಿತ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಕುಶಾಲನಗರ ತಾಲೂಕು ಪತ್ರಕರ್ತರ ಸಂಘಕ್ಕೆ ಕುಶಾಲನಗರ ಜ್ಞಾನಗಂಗಾ ಶಾಲೆಯ ಮುಖ್ಯಸ್ಥರಾದ ರಾಮು ದೇವಯ್ಯ ಅವರು ರು.25 ಸಾವಿರ ರುಪಾಯಿ ದತ್ತಿ ಪ್ರಶಸ್ತಿ ನೀಡಿದ್ದಾರೆ. ಪ್ರತಿ ವರ್ಷ ತಾಲೂಕಿನ ಹಿರಿಯ ಪತ್ರಕರ್ತರಿಗೆ ಈ ದತ್ತಿ ಪ್ರಶಸ್ತಿ ನೀಡಲು ತಾಲೂಕು ಸಂಘದಿಂದ ನಿರ್ಧರಿಸಲಾಗಿದೆ.

ತಾಲ್ಲೂಕಿನ ಸದಸ್ಯರ ಮಕ್ಕಳಾದ ಮಧುರ ಬಿ.ಡಿ, ಅಹನ್ ಪೂಜಾರಿ, ಆರ್ಯ, ದೀಪಿಕಾ, ಯದುನಂದ್, ಭುವಿತ್, ಬೆನಕ್, ಸೋವಿತಾ, ಹರ್ಷಿತ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಕುಶಾಲನಗರ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ.ವಿನ್ಸೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು