News Karnataka Kannada
Sunday, April 28 2024
ಮಡಿಕೇರಿ

ಮಡಿಕೇರಿ: ಬೀಟೆ ಮರದ ನಾಟಾಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

Man arrested for transporting beet tree nuts
Photo Credit : By Author

ಮಡಿಕೇರಿ: ಪಿಕ್‌ಅಪ್ ವಾಹನದಲ್ಲಿ ಸಿಹಿಗೆಣಸು ಮೂಟೆಗಳಡಿಯಲ್ಲಿ ಬೀಟೆ ಮರದ ನಾಟಾಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ವಲಯ ಅರಣ್ಯ ಇಲಾಖೆ ಪತ್ತೆ ಹಚ್ಚಿದೆ.

ವಾಹನ ಸಹಿತ ಚಾಲಕನನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಒಟ್ಟು 5 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ವಿರಾಜಪೇಟೆ ತಾಲೂಕಿನ ಬೇತು ಗ್ರಾಮದ ನಿವಾಸಿ ಆರೀಸು ಎಂ.ಎ. ಬಂಧಿತ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಶಾಮೀಲಾಗಿರುವ ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ವಿರಾಜಪೇಟೆ ವಲಯ ಹೆಗ್ಗಳ ಶಾಖೆಯ ಕೊಟ್ಟೋಳಿ-ವಿರಾಜಪೇಟೆ ಮುಖ್ಯರಸ್ತೆ ಮಾರ್ಗವಾಗಿ ಸಿಹಿ ಗೆಣಸು ಮೂಟೆಗಳಡಿ 11 ಬೀಟೆ ಮರದ ನಾಟಾಗಳನ್ನು ಸಾಗಿಸಲಾಗುತ್ತಿತ್ತು. ವಾಹನವನ್ನು ಪರಿಶೀಲನೆ ನಡೆಸಿದ ಸಂದರ್ಭ ಅಕ್ರಮ ಮರ ಸಾಗಾಟ ಪ್ರಕರಣ ಪತ್ತೆಯಾಗಿದೆ. ಈ ವೇಳೆ ಆರೋಪಿ ಚಾಲಕ ಆರೀಸು ನನ್ನು ಬಂಧಿಸಲಾಯಿತು.

ಕೃತ್ಯದಲ್ಲಿ ಶಾಮೀಲಾಗಿರುವ ಕೊಟ್ಟಮುಡಿ ಹೊದವಾಡ ಗ್ರಾಮದ ಕೆ.ಯು.ಅಬ್ಬಾಸ್ ಹಾಗೂ ನಾಪೋಕ್ಲು ಹಳೇ ತಾಲ್ಲೂಕು ನಿವಾಸಿ ರಿಜ್ವಾನ್ ಎಂಬ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ವಶಕ್ಕೆ ಪಡೆಯಲಾದ ಒಟ್ಟು ಸ್ವತ್ತಿನ ಮೌಲ್ಯ 5 ಲಕ್ಷ ರೂ.ಗಳಾಗಿದ್ದು, ಆರೋಪಿ ವಿರುದ್ದ ಅರಣ್ಯ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು