ಮಡಿಕೇರಿ: ಗೋಣಿಕೊಪ್ಪಲಿನ ಸಂಪೂರ್ಣ ಸ್ವಸ್ಥ ಯೋಗ ಕೇಂದ್ರ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಜನವರಿ 12ರ ಗುರುವಾರ ರಾಷ್ಟ್ರೀಯ ಸೂರ್ಯ ನಮಸ್ಕಾರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಇದೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಸೂರ್ಯ ನಮಸ್ಕಾರ ಚಾಲೆಂಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಯಸ್ಸಿನ ಅಂತರವಿಲ್ಲದೆ ಮುಕ್ತವಾಗಿ ಭಾಗವಹಿಸಬಹುದಾಗಿದೆ.
ಮೊದಲನೇ ಬಹುಮಾನ ನಗದು ರೂ. 30000,ಟ್ರೋಫಿ ಹಾಗೂ ಪ್ರಮಾಣ ಪತ್ರ. ದ್ವಿತೀಯ ಬಹುಮಾನ ರೂ. 15000, ಟ್ರೋಫಿ ಹಾಗೂ ಪ್ರಮಾಣ ಪತ್ರ. ತೃತೀಯ ಬಹುಮಾನ ರೂ. 5000, ಟ್ರೋಫಿ ಹಾಗೂ ಪ್ರಮಾಣ ಪತ್ರ.
ಆಸಕ್ತರು ಜನವರಿ 6ರ ಒಳಗೆ ನೋಂದಾಯಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಸೋಮಯ್ಯನವರು ಕೋರಿಕೊಂಡಿದ್ದಾರೆ. ರಿಜಿಸ್ಟರ್ ಮಾಡಬೇಕಾದ ಮೊಬೈಲ್ ಸಂಖ್ಯೆ.7009865119.