ಮಡಿಕೇರಿ, ಸೆ.7: ಕೂರ್ಗ್ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್ ಶಿಪ್ನಲ್ಲಿ ಮಡಿಕೇರಿಯ ನಾಟ್ಯ ಕಲಾತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.
ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದೆ.
ಸೋಲೋ ವಿಭಾಗದಲ್ಲಿ ಗ್ರಂಥ, ಅದಿಥಿ, ತೇಜಸ್, ಹರ್ಷಿತಾ ಚಿನ್ನದ ಪದಕ ಪಡೆದುಕೊಂಡಿದ್ದು, ಯಾನ ಶೆಟ್ಟಿ, ಆರ್ಯ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಜೋಡಿ ವಿಭಾಗದಲ್ಲಿ ಸಾನ್ವಿಕಾ-ದಿಶಾ, ಇಂಚರಾ-ಆರಾದ್ಯ, ಅದಿಥಿ-ಆರ್ಯ, ತೇಜಸ್-ಹರ್ಷಿತಾ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಗುಂಪು ನೃತ್ಯದಲ್ಲಿ ಸಂಸ್ಥೆಯ ಆರು ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಕೊಡಗಿನಲ್ಲಿ ಪ್ರಥಮ ಬಾರಿಗೆ ನಡೆದ ಬ್ಯಾಟಲ್ ನೃತ್ಯ ಸ್ಪರ್ಧೆಯಲ್ಲಿ ಹರ್ಷಿತಾ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನ ಗೆದ್ದಿದ್ದು, ತೇಜಸ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ನಾಟ್ಯಕಲಾ ನೃತ್ಯ ಸಂಯೋಜಕ ಅಭಿಷೇಕ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…