ಮಡಿಕೇರಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಭವ್ಯ ಭವಿಷ್ಯ ರೂಪಿಸುವ ಸಲುವಾಗಿ ಓಜಸ್ವಿ ಫೌಂಡೇಶನ್ನಿನ ಮೂಲಕ ಓಜಸ್ವಿ ಸ್ಪೂರ್ತಿ ಎಂಬ ವೃತ್ತಿಮಾರ್ಗದರ್ಶನ ಕಾರ್ಯಕ್ರಮವನ್ನು ವಿರಾಜಪೇಟೆ ತಾಲೂಕು ಸರ್ಕಾರಿ ಶಾಲೆಯ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮ ಡಿಸೆಂಬರ್ 13 ರಂದು ಗೋಣಿಕೊಪ್ಪಲುವಿನ ಲಯನ್ಸ್ ಶಾಲಾ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 3.30 ರವರೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರಿನ, ಅಂತಾರಾಷ್ಟ್ರೀಯ ಲೈಫ್ ಸ್ಕಿಲ್ ಕೋಚ್ ಆರ್.ಎ. ಚೇತನ್ ರಾಮ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕೂರ್ಗ್ ಎಜುಕೇಷನ್ ಫಂಡ್ನ ಅಧ್ಯಕ್ಷ ಸುಭಾಷ್ ಮುತ್ತಣ್ಣ, ಗೋಣಿಕೊಪ್ಪಲು ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ಚಿಣ್ಣಪ್ಪ, ವಿರಾಜಪೇಟೆ ಬಿಇಒ ಶ್ರೀಶೈಲ ಬಿಳಗಿ, ಲಯನ್ಸ್ ಟ್ರಸ್ಟ್ ಅಧ್ಯಕ್ಷ ಬೋಸ್ ಪೆಮ್ಮಯ್ಯ, ಎಸ್ಎಸ್ಎಲ್ಸಿ ನೋಡಲ್ ಆಫೀಸರ್ ಅಯ್ಯಪ್ಪ ಪಿ.ಆರ್. ಹಾಗೂ ಲಯನ್ಸ್ ನರ್ಸರಿ ಮತ್ತು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಡಿ. ತಂಗಮ್ಮ ಪಾಲ್ಗೊಳ್ಳಲಿದ್ದಾರೆ.
ಓಜಸ್ವಿ ಫೌಂಡೇಶನ್ ಸಂಸ್ಥಾಪಕಿ ಡಾ.ಕವಿತಾ ಪಿ.ಸಿ., ಓಜಸ್ವಿ ಟ್ರಸ್ಟಿ ವಿಜಿತ ಯು.ಜಿ. ಹಾಗೂ ಟ್ರಸ್ಟ್ ಸದಸ್ಯ ಬ್ರಿಜೇಶ್ ಸಿ.ಎ. ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ಆರ್.ಎ. ಚೇತನ್ ರಾಮ್ ಅವರು “ಪ್ರೇರಣೆ ಹಾಗೂ ವೃತ್ತಿಮಾರ್ಗದರ್ಶನ” ಕುರಿತು ಮಾಹಿತಿ ನೀಡಲಿದ್ದಾರೆ. ಧ್ಯಾನ ಅಭ್ಯಾಸ ಕುರಿತ ಅರಿವನ್ನು ಹಾಸನದ ಪಿರಮಿಡ್ ಸೊಸೈಟಿ ಮೂವ್ಮೆಂಟ್ನ ಷಡಕ್ಷರಿ ಸಿ.ಎಸ್. ನೀಡಲಿದ್ದಾರೆ. ಕೌಶಲ್ಯ ಕರ್ನಾಟಕ ಯೋಜನೆ ಕುರಿತ ಅರಿವು, ಕೋರ್ಸ್ ಮತ್ತು ಜಾಗೃತಿ ಹಾಗೂ ಅವಕಾಶಗಳ ಬಗ್ಗೆ ಬೆಂಗಳೂರಿನ ಸಂಕಲ್ಪ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಸಹಕಾರದ ಮುಖ್ಯಸ್ಥ ಸತೀಶ್ ಬಿ. ಕೆ. ಮಾಹಿತಿ ನೀಡುವರು.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದಂತೆ ಪೊನ್ನಂಪೇಟೆ ತಾಲ್ಲೂಕು ಅಭಿವೃದ್ಧಿ ಅಧಿಕಾರಿ, ಬಿಸಿಡಬ್ಲುö್ಯಡಿ ಹೆಚ್.ಸಿ. ನಾಗರಾಜು, ಪೊನ್ನಂಪೇಟೆ ತಾಲೂಕು ಬುಡಕಟ್ಟು ಕ್ಷೇಮಾಭಿವೃದ್ಧಿ ಅಧಿಕಾರಿ ಗುರುಶಾಂತಪ್ಪ ಹಾಗೂ ಪೊನ್ನಂಪೇಟೆಯ ಎಸ್ಡಬ್ಲ್ಯುಒ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ ಮಾಹಿತಿಯನ್ನು ನೀಡಲಿದ್ದಾರೆ ಎಂದು ಓಜಸ್ವಿ ಫೌಂಡೇಶನ್ ಟ್ರಸ್ಟಿ ಡಾ. ಕವಿತಾ ಪಿ. ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು…
1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…
ಫುಟ್ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…
ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್ ಫೋನ್ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…
ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…
ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.