ಮಡಿಕೇರಿ: ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ಪರಿಶೀಲನಾ ಕಾರ್ಯವು ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು.
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ ಪದ್ಮನಾಭ ಎ.ಎನ್.(ಜನಸಂಘ ಪಾರ್ಟಿ) ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದಂತೆ 21 ಮಂದಿಯ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ತಿಳಿಸಿದ್ದಾರೆ.
ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ ಎಚ್.ಪಿ.ಸರೋಜ(ಪಕ್ಷೇತರ) ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದಂತೆ 9 ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಅವರು ತಿಳಿಸಿದ್ದಾರೆ.
ನಾಮಪತ್ರ ವಾಪಸ್ಸು ಪಡೆಯಲು ಏಪ್ರಿಲ್, 24 ಕಡೆಯ ದಿನವಾಗಿದೆ. ಮೇ, 10 ರಂದು ಮತದಾನ ನಡೆಯಲಿದೆ, ಮೇ, 13 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.