News Karnataka Kannada
Saturday, May 04 2024
ಮಡಿಕೇರಿ

ಮಡಿಕೇರಿ: ಛಾಯಾಗ್ರಾಹಕರ ದಿನಾಚರಣೆ ಪ್ರಯುಕ್ತ ಛಾಯಾಚಿತ್ರ ಮತ್ತು ವೀಡಿಯೋಗ್ರಫಿ ಸ್ಪರ್ಧೆ

Photo and videography competition on the occasion of Photographers' Day
Photo Credit : Pixabay

ಮಡಿಕೇರಿ: ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಪ್ರಯುಕ್ತ ಕೊಡಗು ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ನ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿರುವ ಪದವಿ ವಿದ್ಯಾರ್ಥಿಗಳಿಗೆ ಹಾಗೂ ಕೊಡಗು ಪತ್ರಕರ್ತರ ಸಂಘದ ಸದಸ್ಯರಿಗೆ ಛಾಯಾಚಿತ್ರ ಮತ್ತು ವೀಡಿಯೋಗ್ರಫಿ ಸ್ಪರ್ಧೆ ಏರ್ಪಡಿಸಲಾಗಿದೆ.

“ಮುಂಗಾರು ಮಳೆಯ ಮುಖಗಳು” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಮೊಬೈಲ್ ಹಾಗೂ ಡಿ.ಎಸ್.ಎಲ್.ಆರ್ ಕ್ಯಾಮರಾದಲ್ಲಿ ತೆಗೆದ ಛಾಯಾಚಿತ್ರ ಮತ್ತು ವೀಡಿಯೋಗಳನ್ನು ಸ್ಪರ್ಧೆಗೆ ಸಲ್ಲಿಸಬಹುದಾಗಿದೆ.

2022ನೇ ಆಗಸ್ಟ್ 1 ರಿಂದ 10ರವರೆಗಿನ ಅವಧಿಯಲ್ಲಿ ತೆಗೆದ ಛಾಯಾಚಿತ್ರ ಮತ್ತು ವೀಡಿಯೋಗಳನ್ನು ಮಾತ್ರ ಕಳುಹಿಸಬೇಕು. ವೀಡಿಯೋ ಅವಧಿ ಒಂದು ನಿಮಿಷಕ್ಕೆ ಮಾತ್ರ ಸೀಮಿತವಾಗಿರಬೇಕು. ಅದನ್ನು ಕಟ್ ಹಾಗೂ ಜೋಡಣೆ ಹೊರತುಪಡಿಸಿ ಯಾವುದೇ ರೀತಿಯ ಇತರ ಎಡಿಟಿಂಗ್ ಮಾಡುವಂತಿಲ್ಲ.

ಫೋಟೋಗ್ರಫಿಯನ್ನು ಕೂಡ ಎಡಿಟಿಂಗ್ ಮಾಡಲು ಅವಕಾಶ ಇರುವುದಿಲ್ಲ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪದವಿ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಗುರುತಿನ ಚೀಟಿಯನ್ನು ಸಲ್ಲಿಸಬೇಕು. ಆ.19ರಂದು ಪತ್ರಿಕಾಭವನದಲ್ಲಿ ನಡೆಯುವ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು.

ಪ್ರತಿ ವಿಭಾಗಕ್ಕೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು. ಸ್ಪರ್ಧಿಗಳು ಫೋಟೋ ಹಾಗೂ ವೀಡಿಯೋವನ್ನು kodagupatrakartarasanga@gmail.com ಈ ಇಮೇಲ್‍ಗೆ ಆಗಸ್ಟ್ 10ರೊಳಗೆ ಕಳುಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ 7019124270, 8762986772, 8277021535 ದೂರವಾಣಿಯನ್ನು ಸಂಪರ್ಕಿಸುವಂತೆ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು