ಮಡಿಕೇರಿ: ಗೋಣಿಕೊಪ್ಪಲು ಮತ್ತು ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ದಿವಾಕರ್ ಅವರು ರಾಷ್ಟ್ರಪತಿಗಳ ಚಿನ್ನದ ಪದಕ ಗೌರವಕ್ಕೆ ಭಾಜನರಾಗಿದ್ದಾರೆ.
ಸೇವೆ ಸಲ್ಲಿಸಿದ ಕಡೆಗಳಲೆಲ್ಲಾ ಜನಸ್ನೇಹಿ ಪೊಲೀಸ್ ಅಧಿಕಾರಿ ಎಂದೇ ಜನಮನ್ನಣೆ ಗಳಿಸಿದ್ದ ದಿವಾಕರ್ ಅವರು, ಡಿ. 11ರಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿಯಿಂದ ಸಮ್ಮುಖದಲ್ಲಿ ಚಿನ್ನದ ಪದಕವನ್ನು ಸ್ವೀಕರಿಸಿದರು.